ಬ್ರಹ್ಮಾವರ: ನದಿಗೆ ಈಜಲು ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

ಉಡುಪಿ ಅ.20 (ಉಡುಪಿ ಟೈಮ್ಸ್ ವರದಿ): ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಗ್ಗೇಲುಬೆಟ್ಟು ಮಡಿಸಾಲು ಬಳಿ ನದಿಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಇಬ್ಬರು ಬಾಲಕರ ಮೃತದೇಹ ಇಂದು ಪತ್ತೆಯಾಗಿದೆ.

ಅನಾಸ್(16), ಶ್ರೇಯಸ್ (18) ಮೃತ ಬಾಲಕರು ನಿನ್ನೆ ಉಗ್ಗೇಲುಬೆಟ್ಟು ಮಡಿಸಾಲು ಬಳಿ ನದಿಯಲ್ಲಿ ಮೂವರು ಬಾಲಕರು ಈಜಲು ನೀರಿಗೆ ಇಳಿದಿದ್ದರು, ಈ ಪೈಕಿ ಓರ್ವ ಬಾಲಕ ಪಾರಾಗಿದ್ದರು ಆದರೆ ಉಳಿದಿಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಗಾಬರಿಯಿಂದ ನೀರುಪಾಲಾದ ಯುವಕರ ಬಗ್ಗೆ ಪಾರಾದ ಬಾಲಕ ಯಾವುದೇ ಮಾಹಿತಿ ನೀಡಿರಲಿಲ್ಲ. ಕಾಣೆಯಾಗಿದ್ದ ಇಬ್ಬರ ಮನೆಯವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗಿ ಬಾಲಕರು ನೀರುಪಾಲಾದ ವಿಚಾರ ಬಯಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಈಜು ಪಟು ಈಶ್ವರ್ ಅವರನ್ನು ಕರೆಸಿಕೊಂಡು ಕಾರ್ಯಚರಣೆ ನಡೆಸಿದ್ದರು. ಆದರೆ ಬಾಲಕರು ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ ಇಬ್ಬರು ಬಾಲಕರ ಮೃತದೇಹ ಹರಿಯುವ ನದಿಯಲ್ಲಿ ಪತ್ತೆಯಾಗಿದೆ. 

Leave a Reply

Your email address will not be published. Required fields are marked *

error: Content is protected !!