ಬನ್ನಂಜೆ: ನಿರ್ಮಾಣ ಹಂತದ ಅನಧಿಕೃತ ಕಟ್ಟಡ ತೆರವು

ಉಡುಪಿ ಅ.21(ಉಡುಪಿ ಟೈಮ್ಸ್ ವರದಿ): ಬನ್ನಂಜೆಯಲ್ಲಿನ ನಿರ್ಮಾಣ ಹಂತದ ಅನಧಿಕೃತ ಕಟ್ಟಡವನ್ನು ಇಂದು ನಗರ ಸಭೆಯ ವತಿಯಿಂದ ತೆರವುಗೊಳಿಸಲಾಯಿತು.

ಈ ಬಗ್ಗೆ ನಗರ ಸಭೆಯ ಸಹಾಯಕ ಕಾರ್ಯಪಾಲ ಅಭಿಯಂತರ ಮೋಹನ್ ರಾಜ್ ಅವರು ಉಡುಪಿ ಟೈಮ್ಸ್ ಗೆ ಮಾಹಿತಿ ನೀಡಿ, ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಎಂಬವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಇದಾಗಿತ್ತು. ಕಳೆದ 3 ತಿಂಗಳಿನಿಂದ ಈ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಆರಂಭದಲ್ಲಿ ಈ ಬಗ್ಗೆ ವಿಚಾರಿಸಿದಾಗ ನಾಗಬನ ಎಂದು ಹೇಳಿದ್ದರು. ಬಳಿಕ ಅದು ಕಮರ್ಶಿಯಲ್ ಕಮ್ವೇಶನ್ ಸೆಂಟರ್ ಎಂದು ತಿಳಿದು ಬಂದಿದೆ.

ಹೆದ್ದಾರಿ ಬದಿಯಲ್ಲಿ ವಾಣಿಜ್ಯ ಉದ್ದೇಶದಿಂದ ಕಟ್ಟಡ ನಿರ್ಮಿಸಲು ಅನುಮತಿ ಇಲ್ಲದಿರುವ ಕಾರಣ. ನಿರ್ಮಾಣ ಹಂತದಲ್ಲಿದ್ದ ಈ ಕಟ್ಟಡವನ್ನು ತೆರವುಗೊಳಿಸುವಂತೆ ಎರಡು ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಹೆದ್ದಾರಿ ಪ್ರಾಧಿಕಾರದಿಂದಲೂ ಈ ಬಗ್ಗೆ ನಗರ ಸಭೆಗೆ ನೋಟಿಸ್ ಬಂದಿತ್ತು, ಆದ ಕಾರಣ ನಿರ್ಮಾಣ ಹಂತದ ಈ ಕಟ್ಟಡವನ್ನು ತೆರವು ಗೊಳಿಸುವಂತೆ ಅನೇಕ ಬಾರಿ ನೋಟೀಸ್ ನೀಡಿದರೂ ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಇಂದು ನಗರ ಸಭೆ ವತಿಯಿಂದ ಪೊಲೀಸ್ ಬಂದೋಬಸ್ತ್ ನಲ್ಲಿ ಕಟ್ಟಡವನ್ನು ತೆರವುಗೊಳಿಸಲಾಯಿತು ಎಂದು ತಿಳಿಸಿದರು. 

Leave a Reply

Your email address will not be published. Required fields are marked *

error: Content is protected !!