ಬೈಂದೂರು: ಒತ್ತಿನೆಣೆಯ ತಿರುವಿನಲ್ಲಿ ಲಾರಿ ಪಲ್ಟಿ

ಉಡುಪಿ ಅ.24 (ಉಡುಪಿ ಟೈಮ್ಸ್ ವರದಿ): ಬೈಂದೂರಿನ ಒತ್ತಿನೆಣೆಯ ತಿರುವಿನಲ್ಲಿ ಲಾರಿ ಪಲ್ಟಿಯಾಗಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಕೇರಳದಿಂದ ಕಾರವಾರ ಕಡೆಗೆ ಸಾಗುತ್ತಿದ್ದ ಪ್ಲಾಸ್ಟಿಕ್ ಕವರ್ ತುಂಬಿದ ಲಾರಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಲ್ಲಿ ಐ.ಆರ್.ಬಿ ಕಂಪೆನಿಯ ಮಾಲಿಕತ್ವದಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಕಂಪೆನಿಯ ಕಳಪೆ ಕಾಮಗಾರಿಯಿಂದ ದಿನನಿತ್ಯ ಅಪಘಾತ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದು, ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!