ಡಿ.ಕೆ ಶಿವಕುಮಾರ್ ಆಪ್ತ, ಬೈಂದೂರಿನ ಗುತ್ತಿಗೆದಾರನ ಮನೆಗೆ ಐಟಿ ದಾಳಿ

ಉಡುಪಿ ಅ.28(ಉಡುಪಿ ಟೈಮ್ಸ್ ವರದಿ): ಬೈಂದೂರಿನ ಗುತ್ತಿಗೆದಾರರೊಬ್ಬರ ಮನೆ ಮೇಲೆ ಇಂದು ಮಧ್ಯಾಹ್ನದ ವೇಳೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೈಂದೂರಿನ ಉಪ್ಪುಂದದ ಯು.ಬಿ. ಶೆಟ್ಟಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆದಿದ್ದು, ಮಂಗಳೂರು ಮೂಲದ ಕಾರಿನಲ್ಲಿ ಬಂದ 9 ಮಂದಿ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಉಪ್ಪುಂದ ಮೂಲದ ಯು.ಬಿ. ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅವರ ಉಪ್ಪುಂದದ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಹುಟ್ಟು ಶ್ರೀಮಂತರಾಗಿರುವ ಯುಬಿ ಶೆಟ್ಟಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಬೈಂದೂರು ತಾಲೂಕಿನಲ್ಲಿ ಕಳೆದ ವರ್ಷ ಎರಡು ಶಾಲೆ ಖರೀದಿ ಮಾಡಿದ್ದರು. ಹೆಚ್ ಎಮ್ ಎಮ್ ಎಸ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯೊಂದಿಗೆ ಒಂದು ಶಾಲೆಯನ್ನು ದತ್ತು ಪಡೆದಿದ್ದಾರೆ. ಇದರೊಂದಿಗೆ ಉಪ್ಪುಂದದಲ್ಲಿ ಬಂಗಲೆಯನ್ನು ಹೊಂದಿದ್ದಾರೆ. ಧಾರವಾಡದಲ್ಲಿ ಗುತ್ತಿಗೆ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಇವರು ಡಿಕೆಶಿ ಅವರ ಸಹಕಾರದೊಂದಿಗೆ ಗುತ್ತಿಗೆ ವ್ಯವಹಾರದಲ್ಲಿ ಯಶಸ್ಸು ಸಾಧಿಸಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!