ಉಡುಪಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಧ್ಯಕ್ಷರ ವಿರುದ್ಧ ದೂರು

ಉಡುಪಿ ಅ.29 (ಉಡುಪಿ ಟೈಮ್ಸ್ ವರದಿ): ಯಾವುದೇ ಪೂರ್ವಾನುಮತಿ ಇಲ್ಲದೆ ರ್ಯಾಲಿ ನಡೆಸಿದ ಆರೋಪದ ಮೇಲೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಘಟಕದ ಅಧ್ಯಕ್ಷರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಅ.28 ರಂದು ಸಂಜೆ ಘಟಕದ ಅಧ್ಯಕ್ಷರು ಯಾವುದೇ ಪೂರ್ವಾನುಮತಿಯಿಲ್ಲದೆ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಉಡುಪಿ ನಗರಸಭಾ ವ್ಯಾಪ್ತಿಯ ಜೋಡುಕಟ್ಟೆಯಿಂದ ಕ್ಲಾಕ್ ಟವರ್ ವರೆಗೆ ರ್ಯಾಲಿ ನಡೆಸಿದ್ದು, ಈ ಮೂಲಕ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ ಹಾಗೂ ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ಉಡುಪಿ ನಗರ ಸಭೆಯ ಪೌರಾಯುಕ್ತರು ಉದಯ ಕುಮಾರ್ ಶೆಟ್ಟಿ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!