ಉಡುಪಿ: ಕೋವಿಡ್‌ -19 ಪಾಸಿಟಿವಿಟಿ ದರವು ಶೇ. 1 ಕ್ಕಿಂತ ಕಡಿಮೆ- ಹೊಸ ಮಾರ್ಗ ಸೂಚಿ ಪ್ರಕಟ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌ -19 ಪಾಸಿಟಿವಿಟಿ ದರವು ಶೇಕಡಾ 1 ಕ್ಕಿಂತ ಕಡಿಮೆ ಇರುವುದರಿಂದ ಈ ಕೆಳಗಿನಂತೆ ಆದೇಶಿಸಿದೆ.
1)ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯ ವರೆಗೆ ಕಟ್ಟುನಿಟ್ಟಿನ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ.
2)ಪಬ್ ಗಳನ್ನು ಕೋವಿಡ್-19 ಸೂಕ್ತ ನಡವಳಿಕೆ ಹಾಗೂ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ
ಷರತ್ತುಗಳೊಂದಿಗೆ ತೆರೆಯಲು ಅನುಮತಿಸಿದೆ.

3) ಸಿನೆಮಾ ಹಾಲ್‌ಗಳು/ಮಲ್ಟಿಪ್ಲೆಕ್ಸ್‌ಗಳು/ಚಿತ್ರಮಂದಿರಗಳು/ರಂಗಮಂದಿರಗಳು/ಸಭಾಂಗಣಗಳು ಮತ್ತು ಅಂತಹದೇ  ರೀತಿಯ
ಸ್ಥಳಗಳಲ್ಲಿ ಶೇ. 100 ರಷ್ಟು ಆಸನ ಸಾಮರ್ಥ್ಯದೊಂದಿಗೆ COVID ಸೂಕ್ತ ನಡವಳಿಕೆ ಮತ್ತು ಸಂಬಂಧಪಟ್ಟ ಇಲಾಖೆಗಳು ನೀಡುವ
SOP ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ ಮತ್ತು ಇಂತಹ ಸ್ಥಳಗಳಿಗೆ ಪ್ರವೇಶವನ್ನು ಕನಿಷ್ಠ ಒಂದು ಬಾರಿ ಲಸಿಕೆ ಹಾಕಿಸಿಕೊಂಡ ವ್ಯಕ್ತಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. . ಗರ್ಭಿಣಿಯರು ಮತ್ತು ಪ್ರಾಯದ ವ್ಯಕ್ತಿಗಳಿಗೆ ಇಂತಹ ಸ್ಥಳಗಳಿಗೆ ಭೇಟಿ ನೀಡುವುದು ಸೂಕ್ತವಲ್ಲ ಎಂದು ಸಲಹೆ ನೀಡಿದೆ.  ಸದರಿ ಸ್ಥಳಗಳ. ಪ್ರವೇಶದ್ವಾರದಲ್ಲಿ ಉಷ್ಣ ತಪಾಸಣೆ (Thermal screening) ಮಾಡುವುದು. ಮೇಲೆ ತಿಳಿಸಿದ ಎಲ್ಲಾ ಸ್ಥಳಗಳಲ್ಲಿ ಮತ್ತು
ವಿಶ್ರಾಂತಿ ಕೊಠಡಿಗಳು ಸೇರಿದಂತೆ ಪ್ರತಿ ಪ್ರದರ್ಶನದ ನಂತರ ಸ್ವಚ್ಛಗೊಳಿಸಿ ಸ್ಯಾನಿಟೈಸ್‌ ಮಾಡುವುದು.  ಪ್ರವೇಶ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ(Strategic )  ಹ್ಯಾಂಡ್ ಸ್ಯಾನಿಟೈಜರ್ ಗಳನ್ನು ಸದರಿ ಸಂಸ್ಥೆಗಳೇ ಒದಗಿಸುವುದು.
4) ಜಿಲ್ಲೆಯಲ್ಲಿ 6 ರಿಂದ 12 ನೇ ತರಗತಿಗಳು ವಾರದ 5 ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ  ಕಾರ್ಯಚರಿಸಲು  ಅನುಮತಿಸಿದೆ. ಅಂತಹ ಶಾಲೆಗಳಲ್ಲಿ  ಶನಿವಾರ ಮತ್ತು ಭಾನುವಾರದಂದು ತೀವ್ರತರನಾದ ನೈರ್ಮಲ್ಯವನ್ನು ಮಾಡುವುದು. ಕೋವಿಡ್‌  ನಿಯಮ ಮತ್ತು ಕೋವಿಡ್-19 ಸೂಕ್ತ ನಡವಳಿಕೆಯನ್ನು ಹಾಗೂ ಸಂಬಂಧಪಟ್ಟ ಇಲಾಖೆಯವರು ಹೊರಡಿಸುವ ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP)  ಅನುಸರಿಸುವ ಷರತ್ತಿಗೊಳಪಟ್ಟು  ಕಾರ್ಯನಿರ್ವಹಿಸುವುದು.

5) ಕೋವಿಡ್-19 ಸೂಕ್ತ ಶಿಷ್ಟಾಚಾರವನ್ನು ಅನುಸರಿಸುವ ಷರತ್ತುಗಳೊಂದಿಗೆ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಕ್ರೀಡಾ
ಸಂಕೀರ್ಣಗಳನ್ನು/ ಸ್ಟೇಡಿಯಂಗಳನ್ನು ತೆರೆಯಲು ಅನುಮತಿಸಿದೆ. ಆದರೆ ಪ್ರೇಕ್ಷಕರಿಗೆ ಅನುಮತಿ ಇರುವುದಿಲ್ಲ.
6) ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನಾ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಮತ್ತು ಇತರೆ ಸಭೆಗಳು ಹಾಗೂ
ಸಮಾರಂಭಗಳು ಮತ್ತು ಸಾರ್ವಜನಿಕರು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.

7) ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಮದುವೆ/ ಕೌಟುಂಬಿಕ ಶುಭ
ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ಸಭಾಂಗಣದ ಸಾಮರ್ಥ್ಯದ ಶೇ 50 ರಷ್ಠು ಮತ್ತು ಗರಿಷ್ಠ 400 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
* ಮದುವೆ/ ಕೌಟುಂಬಿಕ ಶುಭ ಸಮಾರಂಭಗಳನ್ನು ಆಯೋಜಿಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ
ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.
* ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ರಮಕ್ಕೆ 400 ಪಾಸ್‌ಗಳನ್ನು ನೀಡಬೇಕು.
* ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತುಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.
* ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್‌ ಸಮುಚಿತ ವರ್ತನೆಯನ್ನು (COVID
APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್‌ಗಳನ್ನು ಅಧಿಕೃತ
ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು.

8) ಕೋವಿಡ್-19 ಸೂಕ್ತ ನಡವಳಿಕೆಯಂತೆ ಅಂತ್ಯ ಸಂಸ್ಕಾರಕ್ಕೆ 20 ಜನಕ್ಕೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
9) ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿಸಲಾಗಿದೆ. ಕೋವಿಡ್‌ ಸಮುಚಿತ ವರ್ತನೆಗಳನ್ನು ಪಾಲಿಸುವುದರೊಂದಿಗೆ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾದ SOP ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಗೊಳಪಟ್ಟು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿಸಿದೆ. ಆದರೆ ಸದರಿ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳು, ದೇವಾಲಯ ಉತ್ಸವಗಳು/ಹಬ್ಬಗಳು ,ಮೆರವಣಿಗೆಗಳು ಮತ್ತು ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ.
10) ಕೋವಿಡ್-19 ಸೂಕ್ತ ನಡವಳಿಕೆಯಂತೆ ಶೇ. 100 ರಷ್ಟು ಆಸನ ಸಾಮರ್ಥ್ಯದವರೆಗೆ ಸಾರ್ವಜನಿಕ ಸಾರಿಗೆಗಳಿಗೆ
ಅನುಮತಿಸಲಾಗಿದೆ.(Only for seating Capacity of Public Transport )
11) ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್ ಗಳು, ಮಾಲ್ ಗಳು, ಖಾಸಗಿ ಕಚೇರಿಗಳು ಮತ್ತು ಮುಚ್ಚಿದ (Closed Places) ಸ್ಥಳಗಳಲ್ಲಿ,
ಕೋವಿಡ್-19 ಸೂಕ್ತ ನಡವಳಿಕೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರನ್ವಯ ಕ್ರಮ ಕೈಕೊಳ್ಳಲಾಗುವುದು.
12) ಕೋವಿಡ್‌ ಸಮುಚಿತ ವರ್ತನೆಗಳೊಂದಿಗೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದಿನಾಂಕ: 12-11-2020 ರಂದು ಹೊರಡಿಸಲಾದ ಸುತ್ತೋಲೆಯಲ್ಲಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು “ ಅಮ್ಯೂಸ್‌ ಮೆಂಟ್‌ ಪಾರ್ಕ್‌ ಮತ್ತು ಅಂತಹ ಇತರ ಸ್ಥಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಈ ಪೈಕಿ ಜಲ ಕ್ರೀಡೆ/ಜಲ ಸಂಬಂಧಿತ ಸಾಹಸ ಚಟುವಟಿಕೆ (water sports/water related adventure activities) ಗಳಿಗೆ ಅನುಮತಿ ಇರುವುದಿಲ್ಲ.
13) ವಿದ್ಯಾಭ್ಯಾಸದ ಸಲುವಾಗಿ ಕೇರಳ ರಾಜ್ಯದಿಂದ ಉಡುಪಿ ಜಿಲ್ಲೆಗೆ ಆಗಮಿಸುವ ನರ್ಸಿಂಗ್‌, ಮೆಡಿಕಲ್‌, ಇಂಜಿನಿಯರಿಂಗ್‌, ಪ್ಯಾರಾ ಮೆಡಿಕಲ್‌ ಒಳಗೊಂಡಂತೆ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರವೇಶಿಸುವ ಪೂರ್ವದಲ್ಲಿ 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್‌ -19 RTPCR ನೆಗೆಟಿವ್‌ ವರದಿಯನ್ನು ಹೊಂದಿರುವುದು. ಮತ್ತು 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ ಒಳಪಡುವುದು ಹಾಗೂ ಕೊನೆಯ ದಿನ RTPCR ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳುವುದು.

14) ಉಡುಪಿ ಜಿಲೆಯಲ್ಲಿ ಉದ್ಯೋಗ ಹೊಂದಿದ್ದು, ಕೇರಳ ರಾಜ್ಯದಿಂದ ಉಡುಪಿ ಜಿಲ್ಲೆಗೆ ಆಗಮಿಸುವ ಅಥವಾ ಉಡುಪಿಗೆ ಪ್ರವೇಶಿಸುವ ಹಿಂದಿನ 7 ದಿನಗಳಲ್ಲಿ ಕೇರಳ ರಾಜ್ಯಕ್ಕೆ ಭೇಟಿ ನೀಡಿದ ಎಲ್ಲಾ ಉದ್ಯೋಗಿಗಳಿಗೆ ಮೇಲಿನ 13ನೇ ವಾಕ್ಯವೃಂದದ ಮಾರ್ಗಸೂಚಿಗಳು ಅನ್ವಯವಾಗುತ್ತದೆ. ಇವುಗಳನ್ನು ಜ್ಯಾರಿಗೊಳಿಸುವುದು ಆಯಾ ಆಡಳಿತ ಮಂಡಳಿಗಳು/ಉದ್ಯೋಗದಾತರ
ಜವಾಬ್ದಾರಿಯಾಗಿರುತ್ತದೆ.
15) “ಎಲ್ಲಾ ಒಳಾಂಗಣ ಮತ್ತು ಹೊರಾಂಗಣ ಪ್ರದರ್ಶನಗಳನ್ನು (Exhibitions) ಕೋವಿಡ್ ಸೂಕ್ತ ವರ್ತನೆ ಮತ್ತು ದಿನಾಂಕ:30-03-
2021 ರಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಹೊರಡಿಸಿದ ಪ್ರಮಾಣಿತ ಕಾರ್ಯಾಚರಣೆ ಪ್ರಕ್ರಿಯೆ (ಎಸ್‌ಒಪಿ) ಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಷರತ್ತುಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ ಮತ್ತು ಇಂತಹ ಸ್ಥಳಗಳಿಗೆ ಪ್ರವೇಶವನ್ನು ಕನಿಷ್ಠ ಒಂದು ಬಾರಿ ಲಸಿಕೆ ಹಾಕಿಸಿಕೊಂಡ ವ್ಯಕ್ತಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ”.
16) 1 ರಿಂದ 5 ನೇ ತರಗತಿಯವರೆಗಿನ ತರಗತಿಯನ್ನು ಕೋವಿಡ್ -19 ಸೂಕ್ತ ನಡವಳಿಕೆ ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಇಲಾಖೆಯಿಂದ ನೀಡಲಾದ ಎಸ್‌ಒಪಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ತೆರೆಯಲು ಅನುಮತಿ ನೀಡಲಾಗಿದೆ.
* ದೈಹಿಕ ತರಗತಿಗಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯಗೊಳಿಸುವುದು.
* ಪ್ರವೇಶ ದ್ವಾರದಲ್ಲಿ ಕೋವಿಡ್ 19 ರೋಗಲಕ್ಷಣಗಳ ಬಗ್ಗೆ ಸ್ಕ್ರೀನಿಂಗ್ ಮಾಡುವುದು, ,
* ತರಗತಿ ಕೊಠಡಿಯ 50% ಸಾಮರ್ಥ್ಯಕ್ಕೆ ಅನುಗುಣವಾಗಿ ತರಗತಿಗಳನ್ನು ನಡೆಸುವುದು.
* ಹ್ಯಾಂಡ್ ಸ್ಯಾನಿಟೈಸರ್ ಗಳನ್ನು ಒದಗಿಸುವುದು,
* ಪ್ರಾಯೋಗಿಕವಾಗಿ ಸಾಧ್ಯವಾದಷ್ಟು ಒಂದು ಮೀಟರ್ ದೈಹಿಕ ಅಂತರವನ್ನು ಕಾಪಾಡುವುದು,
* ವಿಶೇಷವಾಗಿ ಶಾಲಾ ಪ್ರವೇಶ ಮತ್ತು ನಿರ್ಗಮನ ಪ್ರದೇಶದಲ್ಲಿ ಒಟ್ಟುಗೂಡುವುದನ್ನು ನಿರ್ಬಂಧಿಸಲಾಗಿದೆ,.
* 1 % ಸೋಡಿಯಂ ಹೈಪೋಕ್ಲೋರೈಟ್ ದ್ರಾವಣವನ್ನು ಬಳಸಿಕೊಂಡು ತರಗತಿ ಕೊಠಡಿಗಳು ಮತ್ತು ವಿಶ್ರಾಂತಿ ಕೊಠಡಿಗಳನ್ನು ಪ್ರತಿದಿನ ಸೋಂಕು ರಹಿತಗೊಳಿಸುವುದು.
*1 ರಿಂದ 5 ನೇ ತರಗತಿಯಲ್ಲಿ ಕೋವಿಡ್ 19 ಲಸಿಕೆಯ ಎರಡು ಡೋಸ್ ಲಸಿಕೆ ಪಡೆದ ಶಿಕ್ಷಕರು ಮತ್ತು ಸಿಬ್ಬಂದಿಗೆ ಮಾತ್ರ ಅವಕಾಶ
ನೀಡುವುದು. * 50 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷಕರು ಫೇಸ್‌ ಶೀಲ್ಡ್‌ ಗಳನ್ನು ಹೆಚ್ಚುವರಿ ಬಳಕೆ ಮಾಡುವುದು.

17) ಈಜುಕೊಳಗಳನ್ನು ಈ ಕೆಳಗಿನ ಷರತ್ತುಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ:
* ಪ್ರತಿ ಬ್ಯಾಚ್‌ನ ಶೇಕಡ 50 ಸಾಮರ್ಥ್ಯಕ್ಕೆ ಅನುಗುಣವಾಗಿ ಅನುಮತಿಸುವುದು, ಪ್ರವೇಶದ್ವಾರದಲ್ಲಿ ಅನುಮತಿಸಬಹುದಾದ
ಸಂಖ್ಯೆಯನ್ನು ಪ್ರದರ್ಶಿಸುವುದು .
* ಪ್ರವೇಶದ ಸಮಯದಲ್ಲಿ ಎಲ್ಲರನ್ನು ಜ್ವರ ಮತ್ತು ಉಸಿರಾಟದ ಲಕ್ಷಣಗಳ ಬಗ್ಗೆ ತಪಾಸಣೆ ನಡೆಸುವುದು.
* ರೋಗ ಲಕ್ಷಣರಹಿತರಿಗೆ ಮಾತ್ರ ಅವಕಾಶ ಕಲ್ಪಿಸುವುದು.
*ಎರಡು ಡೋಸ್ ಲಸಿಕೆ ಪ್ರಮಾಣ ಪತ್ರಗಳನ್ನು ಹೊಂದಿರುವವರಿಗೆ ಮಾತ್ರ ಅನುಮತಿಸುವುದು.
* ಪ್ರತಿ ಬ್ಯಾಚ್‌ನ ನಂತರ ಈಜುಗಾರರು ಉಪಯೋಗಿಸಿರುವ ವಿಶ್ರಾಂತಿ ಕೊಠಡಿಗಳು , ನಡೆದಾಡುವ ಜಾಗಗಳು (ವಾಕ್‌ವೇಗಳು ) ಮತ್ತು ಇತರ ಸಾಮಾನ್ಯ ಪ್ರದೇಶಗಳನ್ನು ಶೇಕಡ 1 ಸೋಡಿಯಂ ಹೈಪೋಕ್ಲೋರೈಟ್ ದ್ರಾವಣವನ್ನು ಬಳಸಿ ಸ್ವಚ್ವಗೊಳಿಸುವುದು.

A) ಕೋವಿಡ್ ಸಮುಚಿತ ವರ್ತನೆ
* COVID-19 ಸೂಕ್ತ ನಡವಳಿಕೆಯನ್ನು ಕಡ್ಡಾಯವಾಗಿ ಪಾಲಿಸಲು ಮುಖಗವಸುಗಳನ್ನು ಧರಿಸುವುದು, ಕೈಗಳ ನೈರ್ಮಲ್ಯ ಮತ್ತು
ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳುವುದು.
* ಮಾಸ್ಕ್ ಧರಿಸುವುದು, ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಅತ್ಯವಶ್ಯಕ ಕ್ರಮವಾಗಿದ್ದು, ಮುಖಗವಸುಗಳನ್ನು ಧರಿಸದ ವ್ಯಕ್ತಿಗಳ ವಿರುದ್ಧ ಮಹಾ ನಗರ ಪಾಲಿಕೆ ಪ್ರದೇಶಗಳಲ್ಲಿ ರೂ. 250/- ಮತ್ತು ಇನ್ನಿತರ ಪ್ರದೇಶಗಳಲ್ಲಿ ರೂ.100/- ದಂಡ ವಿಧಿಸಲಾಗುವುದು.
* ಕೋವಿಡ್‌ ನಿರ್ವಹಣೆಗಾಗಿ ರಾಷ್ಟ್ರೀಯ ನಿರ್ದೇಶನಗಳನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪಾಲಿಸುವುದು. ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005, Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳ ಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ದಿನಾಂಕ:29.10.2021 ರಂದು ನನ್ನ ಸ್ವಹಸ್ತಾಕ್ಷರ ಮತ್ತು ಮುದ್ರೆಯೊಂದಿಗೆ ಹೊರಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!