ಕಾಪು: ಮಹಿಳೆ ಆತ್ಮಹತ್ಯೆ
ಕಾಪು ನ.10 (ಉಡುಪಿ ಟೈಮ್ಸ್ ವರದಿ): ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರದ ಮೇಲ್ಪೇಟೆಯಲ್ಲಿ ನಡೆದಿದೆ.
ವನಿತಾ ಹೆಗ್ಡೆ (61)ಆತ್ಮಹತ್ಯೆ ಮಾಡಿಕೊಂಡವರು. ಇವರು ತಮ್ಮ ಮಗನಿಗೆ ಮದುವೆ ಆಗಿಲ್ಲ ಎಂಬ ಚಿಂತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಗಿನ ಜಾವ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಮರಣದಲ್ಲಿ ಬೇರೆ ಯಾವುದೇ ಕಾರಣ ಇರುವುದಿಲ್ಲ ಎನ್ನುವುದಾಗಿ ಮೃತರ ಮಗಳು ಸುಲಕ್ಷಣಾ ಪ್ರಭು ಅವರು ನೀಡಿದ ದೂರಿನಂತೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೆ ಪರಿಹಾರವಲ್ಲ..
ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್.ಎಸ್.ಆರ್ ಸೆಕ್ಟರ್- 4, ಬೆಂಗಳೂರು