ಇಂದು ಬಯಸಿದ್ದನ್ನು ನೀಡಿ, ಮುಂದೊಂದು ದಿನ ಬಿಜೆಪಿಗೆ ಅಚ್ಚರಿಗೊಳಿಸುತ್ತಾರೆ ಮತದಾರ- ಶಶಿ ತರೂರ್

ಜೈಪುರ ಮಾ.14: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಂಡ ಚೈತನ್ಯ ಹಾಗೂ ಕ್ರಿಯಾಶೀಲತೆಯ ವ್ಯಕ್ತಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.

ಪಂಚರಾಜ್ಯ ಚುನಾವಣಾ ಫಲಿತಾಂಶ ವಿಚಾರವಾಗಿದೆ ಮಾಧ್ಯಮದ ಜೊತೆ ಮಾತನಾಡಿದ ಅವರು ಬಿಜೆಪಿಯು ಇಷ್ಟು ಅಂತರದಿಂದ ಗೆಲ್ಲುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಆದರೆ ಅವರು ಗೆಲುವು ಸಾಧಿಸಿದ್ದಾರೆ. ಪ್ರಧಾನಿ ನರೆಂದ್ರ ಮೋದಿ ಅವರು ರಾಜಕೀಯವಾಗಿ ಪ್ರಭಾವಶಾಲಿ ಕೆಲವು ಕೆಲಸಗಳನ್ನು ಮಾಡಿದ್ದಾರೆ ಎಂದು ಇತ್ತೀಚೆಗೆ ಮುಕ್ತಾಯಗೊಂಡ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿ,

ಇದೇ ವೇಳೆ, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿದ ಅವರು, ಭಾರತೀಯ ಮತದಾರರು ಅಚ್ಚರಿಗೊಳಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇಂದು ಜನರು ಬಿಜೆಪಿಗೆ ಬಯಸಿದ್ದನ್ನು ನೀಡಿದ್ದಾರೆ. ಆದರೆ ಮುಂದೊಂದು ದಿನ ಮತದಾರರು ಬಿಜೆಪಿಯನ್ನು ಅಚ್ಚರಿಗೊಳಿಸುತ್ತಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!