ಕರಾವಳಿಯಲ್ಲಿದ್ದ ಕೋಮು ದ್ವೇಷ ರಾಜ್ಯಾದ್ಯಂತ ಹಬ್ಬಿಸಿ ಬೆಂಕಿ ಇಡುವ ಯತ್ನ!- ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಬೆಂಗಳೂರು: ಹಿಂದೂಗಳ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ ಹೇರಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೂರು ನಾಲ್ಕು ತಿಂಗಳ‌ ಹಿಂದೆಯೇ ಹೇಳಿದ್ದೆ. ಭಾವನಾತ್ಮಕ ವಿಚಾರಗಳಲ್ಲಿ ಗೊಂದಲ ಸೃಷ್ಟಿಸಿ ಕೆಲಸ ಮಾಡುತ್ತಾರೆಂದು ಪ್ರಿಡಿಕ್ಟ್ ಮಾಡಿದ್ದೆ ಎಂದರು.

ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಕರ್ನಾಟಕದಲ್ಲಿ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದ್ದಾರೆ. ಕರಾವಳಿಯಲ್ಲಿದ್ದ ಕೋಮು ದ್ವೇಷವನ್ನು ರಾಜ್ಯಾದ್ಯಂತ ಅಳವಡಿಸಿಕೊಳ್ಳುತ್ತಿದ್ದಾರೆ. ಜನರು ಇದೆಲ್ಲವನ್ನು ನೋಡುತ್ತಿದ್ದಾರೆ ಎಂದು ಹೇಳಿದರು.

ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಜನರ ಧಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರ ಜನಪರ ಕೆಲಸಗಳು ದೇಶವನ್ನು ಉದ್ದಾರ ಮಾಡಿದ್ದಾರಂತೆ. ಅದಕ್ಕಾಗಿ ಜನರೂ ಅವರ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿಲ್ಲವೆನ್ನುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ನೀತಿಗಳನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಖಂಡಿಸಿದರು.

Leave a Reply

Your email address will not be published. Required fields are marked *

error: Content is protected !!