ಧರ್ಮಸ್ಥಳದ ದಿನೇಶ್ ಕೊಲೆ ಪ್ರಕರಣ: ಆರೋಪಿ ಬಿಜೆಪಿ ಮುಖಂಡನಿಗೆ ಜಾಮೀನು

ಬೆಳ್ತಂಗಡಿ, ಮಾ.25: ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದಿನೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಬಿಜೆಪಿ ಮುಖಂಡ ಡಿ.ಕೃಷ್ಣನಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿ.

ಜಾಗದ ನೋಂದಣಿ ವಿಚಾರವನ್ನು ಸಾರ್ವಜನಿಕವಾಗಿ ಹೇಳಿದ್ದಾರೆ ಎಂಬ ಕೋಪದಲ್ಲಿ ಫೆ.23ರಂದು ಕನ್ಯಾಡಿ ರಾಮಮಂದಿರದ ಬಳಿ ವ್ಯಾಪಾರ ಮಾಡುತ್ತಿದ್ದ ದಿನೇಶ್ ಅವರಿಗೆ ಅಲ್ಲಿನ ಮತ್ತೊಬ್ಬ ವ್ಯಾಪಾರಿ ಯಾಗಿರುವ ಕೃಷ್ಣ ಹಲ್ಲೆ ನಡೆಸಿದನೆಂದು ಆರೋಪಿಸಲಾಗಿತ್ತು. ಅಲ್ಲದೆ ಹಲ್ಲೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಹಲ್ಲೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ದಿನೇಶ್ ಫೆ.24ರಂದು ತಡರಾತ್ರಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಮರುದಿನ ದಿನೇಶ್ ತಾಯಿ ಪದ್ಮಾವತಿ ಮಗನದ್ದು ಕೊಲೆ ಎಂದು ಆರೋಪಿಸಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಧರ್ಮಸ್ಥಳ ಪೊಲೀಸರು ಕೂಡಲೇ ಆರೋಪಿಯನ್ನು ಬಂಧಿಸಿದ್ದರು. ಇದೀಗ ಜಿಲ್ಲಾ ನ್ಯಾಯಾಲಯ ಪ್ರಕರಣದ ಆರೋಪಿಗೆ ಜಾಮಿನು ನೀಡಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!