ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರ ತನ್ನದೇ ಕಾರ್ಯಕರ್ತನ ಬಲಿ ಪಡೆದಿದೆ: ರಾಹುಲ್ ಗಾಂಧಿ

ನವದೆಹಲಿ: 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದೇ ಕುಖ್ಯಾತಿ ಪಡೆದಿರುವ ಕರ್ನಾಟಕ ಬಿಜೆಪಿ ಸರ್ಕಾರ ತನ್ನದೇ ಪಕ್ಷದ ಕಾರ್ಯಕರ್ತನೊಬ್ಬನನ್ನು ಬಲಿ ಪಡೆದಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಬೊಮ್ಮಾಯಿ ಸರ್ಕಾರದ ವಾಗ್ದಾಳಿ ನಡೆಸಿದ್ದಾರೆ.

ಇಂದು ಉಡುಪಿಯ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪ್ರಕರಣವನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಗುತ್ತಿಗೆದಾರ ಪ್ರಧಾನಿ ಮೋದಿ ಅವರಿಗೆ ಮಾಡಿದ ಮನವಿಗೂ ಯಾವುದೇ ಉತ್ತರ ಸಿಗದಂತಾಯ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಾವಿನಲ್ಲಿ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರೂ ಭಾಗೀದಾರರು ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಅವರು #BJPCouuruptionFiles ಎಂಬ ಹ್ಯಾಷ್‌ಟ್ಯಾಗ್ ಅಡಿ ಮಾಧ್ಯಮ ವರದಿಯೊಂದರ ಸ್ಕ್ರೀನ್ ಶಾಟ್ ಸಮೇತ ಟ್ವೀಟ್ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *

error: Content is protected !!