ಕಾಪು: ಕೊರೊನ ವಾರಿಯರ್ಸ್ ಗೆ ರಾಮ ಮಂತ್ರದ ಜೊತೆ ರಕ್ಷಾ ಬಂಧನ ವಿತರಣೆ

ಕಾಪು: ವಿಧಾನ ಸಭಾ 26 ಗ್ರಾಮ ಪಂಚಾಯತ್ ಮತ್ತು ಪುರಸಭೆಯ ಸಿಬ್ಬಂದಿಗಳಿಗೆ, ರಕ್ಷಾ ಬಂಧನವನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.

ಶಾಸಕರಾದ ಲಾಲಾಜಿ ಮೆಂಡನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಕಾಪು ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೇಬೆಟ್ಟು, ಜಿಲ್ಲಾ ಯುವಮೋರ್ಚಾ ಪ್ರದಾನ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುಮಾ ಶೆಟ್ಟಿ, ಮತ್ತು ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಕ್ಷೇತ್ರ ಯುವಮೋರ್ಚಾ ಕಾರ್ಯದರ್ಶಿ ಸೋನು ಪಾಂಗಳ ಸ್ವಾಗತಿಸಿ, ಪ್ರದಾನ ಕಾರ್ಯದರ್ಶಿ ಕಿಶನ್ ಅಲೆವೂರ್ ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *

error: Content is protected !!