ಭಾರೀ ಭೂಕುಸಿತ: ಚಾರ್ಮಾಡಿ ಘಾಟ್ ರಸ್ತೆ ಎರಡು ದಿನ ಬಂದ್!

ಮಂಗಳೂರು: ಭಾರೀ ಭೂಕುಸಿತ, ರಸ್ತೆ ಬಿರುಕು ಮತ್ತು ಭಾರೀ ಮಳೆಯಿಂದಾಗಿ ಮರಗಳು ಧರೆಗುಳಿದಿದ್ದರಿಂದ ಚಾರ್ಮಾಡಿ ಘಾಟ್‌ನಲ್ಲಿ(ಎನ್‌ಎಚ್ -73) ವಾಹನಗಳ ಸಂಚಾರವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿದೆ.

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಚಾರ್ಮಡಿ ಘಾಟ್ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಚಾರ್ಮಡಿ ಮತ್ತು ಕೊಟ್ಟಿಗೆಹಾರ ಚೆಕ್ ಪೋಸ್ಟ್‌ಗಳನ್ನು ಮುಚ್ಚಲಾಗಿದೆ. 

ಮುನ್ನೆಚ್ಚರಿಕೆ ಕ್ರಮವಾಗಿ ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!