ಗಂಡಸೂ ಅಲ್ಲ ಹೆಂಗಸೂ ಅಲ್ಲದ ಸರ್ಕಾರವಿದು, ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ- ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ

ಬೆಂಗಳೂರು ಮೇ 24: ಗಂಡಸೂ ಅಲ್ಲ ಹೆಂಗಸೂ ಅಲ್ಲದ ಸರ್ಕಾರವಿದು. 2023 ಕ್ಕೆ ರಾಜ್ಯದಲ್ಲಿ ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಈ ವಿಚಾರವಾಗಿ ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸರ್ಕಾರದ ಜೊತೆಗೆ ಹೋರಾಡಲೂ ಆಗುವುದಿಲ್ಲ ಸುಮ್ಮನಿರಲೂ ಆಗುವುದಿಲ್ಲ. ಹೆಂಗಸರಾದರೆ ಹೆಂಗಸರ ಜೊತೆಗೆ ಕಳುಹಿಸಬಹುದು, ಗಂಡಸರಾದರೆ ಗಂಡಸರ ಜೊತೆ ಕಳುಹಿಸಬಹುದು. ಆದರೆ ಇವರು ಎರಡೂ ಅಲ್ಲ, ಭಾಷಾ ಅಂತ ಚಪ್ಪಾಳೆ ತಟ್ಟಿ ಬಿಡುತ್ತಾರೆ. ಏನಾದರೂ ಆರೋಪ ಮಾಡಿದರೆ ಕಿಸಿಕ್ ಎಂದು ನಗಾಡ್ತಾರೆ, ಏನು ಮಾಡೋಣ ಎಂದು ವ್ಯಂಗ್ಯ ವಾಡಿದರು. ಇದೇ ವೇಳೆ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಬಗ್ಗೆ ಮಾತನಾಡಿ ಬಡಿಸುವ ಜಾಗದಲ್ಲಿ ಇದ್ದು ನಾವೇ ಊಟ ಮಾಡಲು ಕೂತರೆ ಹೇಗೆ ಎಂದ ಅವರು, ನಾನು ಆಕಾಂಕ್ಷಿ ಆಗಿರಲಿಲ್ಲ. ಪಕ್ಷದ ಅಧ್ಯಕ್ಷನಾಗಿ ಉದಾತ್ತ ಮನೋಭಾವ ತೋರಿಸಬೇಕು ಎಂದರು.

Leave a Reply

Your email address will not be published. Required fields are marked *

error: Content is protected !!