ಕುಂದಾಪುರ ಉದ್ಯಮಿ ಆತ್ಮಹತ್ಯೆ ಪ್ರಕರಣ: ಹಣಕಾಸಿನ ವ್ಯವಹಾರದ ಯಾವುದೇ ದಾಖಲೆ ಪತ್ತೆಯಾಗಿಲ್ಲ

ಉಡುಪಿ ಮೇ 27: ಕುಂದಾಪುರದ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾದ ಮೊಳಹಳ್ಳಿ ಗಣೇಶ್ ಶೆಟ್ಟಿ ಹಾಗೂ ಎಚ್.ಇಸ್ಮಾಯಿಲ್ ಹಾಗೂ ಗೋಪಾಲಕೃಷ್ಣ ರಾವ್ ನಡುವಿನ ವ್ಯವಹಾರದ ಬಗ್ಗೆ ಇನ್ನಾವುದೇ ದಾಖಲೆ ಈವರೆಗೆ ಇಲಾಖೆಗೆ ಸಿಕ್ಕಿಲ್ಲ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ ಹೇಳಿದ್ದಾರೆ.

ಈ ವಿಚಾರವಾಗಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇವರ ನಡುವಿನ ಹಣದ ವ್ಯವಹಾರದ ಕುರಿತು ಡೆತ್‌ ನೋಟ್‌ನಲ್ಲಿ ಬರೆದಿಟ್ಟಿರುವುದು ಬಿಟ್ಟರೆ ಇನ್ನಾವುದೇ ವ್ಯವಹಾರದ ಕುರಿತು ದಾಖಲೆ ಲಭ್ಯವಾಗಿಲ್ಲ ಎಂದರು.
ಗೋಪಾಲಕೃಷ್ಣ ಪ್ರತಿದಿನ ಗಣೇಶ್ ಶೆಟ್ಟಿಯ ಮನೆಗೆ ಹೋಗಿ ಬರುತ್ತಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುವ ಸಮಯದಲ್ಲಿ ಗಣೇಶ್ ಶೆಟ್ಟಿ ಕೂಡ ಮನೆಯಲ್ಲಿ ಇದ್ದು ಪ್ರಾಣಿಗಳಿಗೆ ಆಹಾರ ಹಾಕುತ್ತಿದ್ದರು. ಆ ಸಮಯದಲ್ಲಿ ತನ್ನ ಸ್ವಂತ ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣೇಶ್ ಶೆಟ್ಟಿ ಅವರನ್ನು ಕರೆದು ವಿಚಾರಣೆ ಮಾಡಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.

ಇವರ ನಡುವಿನ ಹಣದ ವ್ಯವಹಾರದ ಕುರಿತು ಇನ್ನಷ್ಟೇ ಪರಿಶೀಲನೆ ನಡೆಸಬೇಕಾಗಿದೆ. ಆತ್ಮಹತ್ಯೆಗೆ ಮೊದಲು ಕಟ್ಟೆ ಗೋಪಾಲಕೃಷ್ಣ, ಗಣೇಶ್ ಶೆಟ್ಟಿ ಜೊತೆ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮಾತುಕತೆ ನಡೆಸಿರುವ ಕುರಿತು ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!