ಕುಂದಾಪುರ ಉದ್ಯಮಿ ಆತ್ಮಹತ್ಯೆ ಪ್ರಕರಣ: ಮೊಳಹಳ್ಳಿ ಗಣೇಶ ಶೆಟ್ಟಿ ಬಂಧನ
ಕುಂದಾಪುರ: ಕೋಟೇಶ್ವರದ ಅಂಕದಕಟ್ಟೆಯಲ್ಲಿ ಗುರುವಾರ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೊಳಹಳ್ಳಿ ಗಣೇಶ ಶೆಟ್ಟಿಯವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.
ಮೃತರ ಪುತ್ರ ಸುಧೀಂದ್ರ ಕಟ್ಟೆ ತಂದೆಯ ಸಾವಿಗೆ ಮೊಳಹಳ್ಳಿ ಗಣೇಶ ಶೆಟ್ಟಿ ಮತ್ತು ಬ್ರೊಕರ್ ಇಸ್ಮಾಯಿಲ್ ಅವರ ಪ್ರಚೋದನೆಯೇ ಕಾರಣ ಎಂದು ದೂರು ನೀಡಿದ್ದು ಸೆಕ್ಷನ್ 306 ಪ್ರಕಾರ ಪ್ರಕರಣ ದಾಖಲಾಗಿತ್ತು. ಪ್ರಕರಣ ಅರೋಪಿಗಳ ಪ್ಯೆಕಿ ಗಣೇಶ ಶೆಟ್ಟಿ ಬಂಧಿಸಲ್ಪಟ್ಟಿದ್ದು ಇನ್ನು ಇಸ್ಮಾಯಿಲ್ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.
ಬಂಧಿತ ಆರೋಪಿಯನ್ನು ಶುಕ್ರವಾರ ರಾತ್ರಿ ಮ್ಯಾಜಿಸ್ಟ್ರೇಟ್ ಮನೆ ಮುಂದೆ ಹಾಜರುಪಡಿಸಲಾಗಿದ್ದು ಮೇ 30 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವಶ್ಯವಿದ್ದಲ್ಲಿ ವ್ಯೆದ್ಯಕೀಯ ಚಿಕಿತ್ಸೆಗೆ ಒಳಪಡಿಸಬಹುದು ಎಂದು ಅದೇಶಿಸಿದೆ.