ಉಡುಪಿ ಬಿಆರ್’ಎಸ್ ಆಸ್ಪತ್ರೆಯ ಸಿಬ್ಬಂದಿಗಳ 5 ತಿಂಗಳ ಬಾಕಿ ವೇತನ ಕೂಡಲೇ ಬಿಡುಗಡೆ- ಸಿಎಂ ಬೊಮ್ಮಾಯಿ

ಉಡುಪಿ ಜೂ.1(ಉಡುಪಿ ಟೈಮ್ಸ್ ವರದಿ): ನಗರದ ಕೂಸಮ್ಮ ಶಂಭು ಶೆಟ್ಟಿ, ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿಗಳ ಬಾಕಿ ಇರುವ 5 ತಿಂಗಳ ವೇತನವನ್ನು ಕೂಡಲೇ ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ.

ಇಂದು ಮಣಿಪಾಲದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಆಸ್ಪತ್ರೆಯಲ್ಲಿ ಇರುವಂತಹ ಇತರ ಕೆಲವೊಂದು ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಸರಿಪಡಿಸುತ್ತೇವೆ ಎಂದು ಹೇಳಿದರು. ಈ ವೇಳೆ ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು,  ಕೆಲವು ಸ್ವಾಮೀಜಿಗಳು ನೀಡಿರುವ ಪತ್ರಗಳನ್ನು ಹಾಗೂ ಎಲ್ಲವನ್ನೂ ಪರಿಗಣಿಸುತ್ತೇವೆ. ಈ ಎಲ್ಲಾ ವಿಚಾರಗಳ ಬಗ್ಗೆ ಶಿಕ್ಷಣ ಸಚಿವರಿಗೆ ಸಮಗ್ರವಾದ ವರದಿಯನ್ನು ಹಾಗೂ ವಾಸ್ತವ ಅಂಶವನ್ನು ತಿಳಿಸುತ್ತೇವೆ. ಬಳಿಕ ಇದರ ಬಗ್ಗೆ ಚರ್ಚಿಸಿ ಸರಿಯಾದ ನಿರ್ಣಯ ತಿಳಿಸುತ್ತೇವೆ ಎಂದರು. ಲೋಕಾಯುಕ್ತ ವ್ಯವಸ್ಥೆ ಇದ್ದರೂ ಕೂಡಾ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆಗುತ್ತಿರಲಿಲ್ಲ. ಆದರೀಗ ಎಸಿಬಿ ವ್ಯವಸ್ಥೆ ಬಲವರ್ಧನೆ ಆಗಿದ್ದು ಈಗ ಪ್ರಕರಣಗಳು ದಾಖಲಾಗಿದೆ ತನಿಖೆಗಳು ನಡೆಯುತ್ತಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!