ಮಂಗಳೂರು: ಹಿಜಾಬ್ ಧರಿಸಿ ಬರುತ್ತಿದ್ದ ಆರು ವಿದ್ಯಾರ್ಥಿನಿಯರ ಅಮಾನತು
ಮಂಗಳೂರು ಜೂ.2: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬರುತ್ತಿದ್ದ ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ.
ಶಾಲಾ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಸಂಕೇತ ಸೂಚಿಸುವ ಉಡುಪುಗಳನ್ನು ಧರಿಸುವಂತಿಲ್ಲ ಎಂದು ಹೈ ಕೋರ್ಟ್ ತೀರ್ಪು ನೀಡಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಆಗಮಿಸುತ್ತಿದ್ದರು.
ಹೀಗೆ ಹಿಜಾಬ್ ಧರಿಸಿ ಬರುತ್ತಿದ್ದ ಆರು ವಿದ್ಯಾರ್ಥಿನಿಯರಿಗೆ ಹಲವು ಬಾರಿ ಶಿಕ್ಷಕರು, ಸಿಬ್ಬಂದಿಗಳು ತಿಳಿ ಹೇಳಿದ್ದಾರೆ. ಆದರೂ ಶಿಕ್ಷಕರ ಮಾತಿಗೆ ಕ್ಯಾರೇ ಎನ್ನದೆ ಹಿಜಾಬ್ ಧರಿಸಿಯೇ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿದ್ದು, ಈ ವಿದ್ಯಾರ್ಥಿಗಳಿಂದ ಕಾಲೇಜಿನಲ್ಲಿ ಸಂಘರ್ಷವಾಗುವ ಸಾಧ್ಯತೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಸಭೆ ನಡೆಸಿ 6 ವಿದ್ಯಾರ್ಥಿನಿಯರನ್ನ ಅಮಾನತುಗೊಳಸಲಾಗಿದೆ ಎಂದು ತಿಳಿದು ಬಂದಿದೆ.