ಉಚ್ಚಿಲ ಅಕ್ರಮ ಕಸಾಯಿಖಾನೆಗೆ ದಾಳಿ: ನಾಲ್ವರ ಬಂಧನ- ಓರ್ವ ಪರಾರಿ
ಕಾಪು ಜೂ.2( ಉಡುಪಿ ಟೈಮ್ಸ್ ವರದಿ): ಉಚ್ಚಿಲ ಭಾಸ್ಕರ ನಗರ ಜುಮ್ಮಾ ಮಸೀದಿ ಬಳಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಹಮ್ಮದ್ ರಫೀಕ್, ಇಲಿಯಾಸ್, ಮಹಮ್ಮದ್ ಮೋಹಿದ್ದೀನ್, ಮೊಯ್ದಿನಬ್ಬ ಪೊಲೀಸರು ವಶಕ್ಕೆ ಪಡೆದವರು.
ಪೊಲೀಸ್ ದಾಳಿ ವೇಳೆ ಪ್ರಕರಣದ ಪ್ರಮುಖ ಆರೋಪಿ ರಫೀಕ್ ಎಂಬಾತ ಪರಾರಿಯಾಗಿದ್ದಾನೆ. ಈ ವೇಳೆ ಪೊಲೀಸರು ಸ್ಥಳದಲ್ಲಿ ಇದ್ದ ಒಂದು ಜೀವಂತ ಹಸು, ಮಾಂಸಕ್ಕೆ ಕಡಿಯಲಾದ ಹಸು ಹಾಗೂ ಮಾರಾಟಕ್ಕೆ ಕಡಿಯಲಾಗಿದ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಉಚ್ಚಿಲ ಭಾಸ್ಕರ ನಗರದಲ್ಲಿ ಸಬಾನ್ ಎಂಬವರ ಮನೆಯಲ್ಲಿ ಕಸಾಯಿಕಾನೆ ನಡೆಯುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ನಾಲ್ವರನ್ನು ವಶಕ್ಕೆ ಪಡೆದು ಕೊಂಡಿದ್ದು ಓರ್ವ ಪರಾರಿಯಾಗಿದ್ದಾನೆ. ಈ ಕಾರ್ಯಾಚರಣೆ ಯಲ್ಲಿ ಕಾಪು ವೃತ್ತ ನಿರೀಕ್ಷಕ ಪ್ರಕಾಶ್, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಪಡುಬಿದ್ರಿ ಪೊಲೀಸರು ಭಾಗವಹಿಸಿದ್ದಾರೆ.