ಉಡುಪಿ: ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ರಕ್ಷಣೆ
ಉಡುಪಿ: ನಗರದ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೋರ್ವನನ್ನು ರಕ್ಷಣೆ ಮಾಡಿದ ಘಟನೆ ಗುರುವಾರ ಸಂಭವಿಸಿದೆ.
ರಕ್ಷಣೆಗೆ ಒಳಗಾದ ವ್ಯಕ್ತಿಯನ್ನು ರೋಹನ್ ರಾಜೇಶ ಜತ್ತನ್ನ ಎಂದು ಗುರುತಿಸಲಾಗಿದೆ. ಉಡುಪಿ ನಗರದ ಶಾಂತಲಾ ಲಾಡ್ಜ್’ನಲ್ಲಿ ಕೌಟಂಬಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾದ ರೋಹನ್ ರಾಜೇಶ್ ಜತ್ತನ್ನ ಎಂಬ ವ್ಯಕ್ತಿ ಬ್ಲೇಡ್ ನಲ್ಲಿ ಕೈಕೊಯ್ದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.
ಬಳಿಕ ಆತ ತನ್ನ ಮಂಗಳೂರಿನ ಸ್ನೇಹಿತ ಆದಿತ್ಯ ಎಂಬಾತನಿಗೆ ಕರೆ ಮಾಡಿದ್ದು, ಆದಿತ್ಯ ಕೂಡಲೇ ಮಂಗಳೂರು ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದ್ದನು. ಮಂಗಳೂರು ಪೋಲಿಸ್ ಕಂಟ್ರೋಲ್ ರೂಮಿನಿಂದ ಉಡುಪಿ ಪೊಲೀಸರಿಗೆ ಮಾಹಿತಿ ಬಂದಿದ್ದು ಕೂಡಲೇ ಉಡುಪಿ ನಗರ ಠಾಣೆ ಪೊಲೀಸರು ಲಾಡ್ಜಿಗೆ ದೌಡಿಯಿಸಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ರೋಹನ್’ರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ರೋಹನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.