ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಿದ್ದ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿಲ್ಲ

ಬೆಳಗಾವಿ ಜೂ.3: ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಿದ್ದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವಾಗಲೇ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿರಲಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ಈ ಬಗ್ಗೆ ಸ್ಪಷ್ಟಣೆ ನೀಡಿರುವ ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು,ಕಾರ್ಮಿಕ ಮಹಿಳೆ ಮಲ್ಲಮ್ಮರನ್ನು ಕೆಲಸದಿಂದ ತೆಗೆದು ಹಾಕಿಲ್ಲ. ಅವರಿಗೆ ಇನ್ನೊಂದು ಸೈಟ್ ನಲ್ಲಿ ಕೆಲಸ ನೀಡಲಾಗಿತ್ತು. ಇದೀಗ ಅಲ್ಲಿಂದ ಮತ್ತೆ ಸುವರ್ಣ ಸೌಧದದಲ್ಲಿ ಕೆಲಸ ನೀಡುವಂತೆ ಹೇಳಿರುವುದಾಗಿ ತಿಳಿಸಿದ್ದಾರೆ.

ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣಗಿಸಿದ್ದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ  #IStandWithMallavva ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ಅಭಿಯಾನ ನಡೆದಿತ್ತು. ಶ್ಯಾವಿಗೆ ಒಣ ಹಾಕಿದ ಮಲ್ಲಮ್ಮರನ್ನು ಕೆಲಸದಿಂದ ಕಿತ್ತುಹಾಕುವ ಮೂಲಕ ಲೋಕೋಪಯೋಗಿ ಕ್ರಮಕೈಗೊಂಡಿತ್ತು. ಆದರೆ, ಸುವರ್ಣ ವಿಧಾನಸೌಧದ ಮೆಟ್ಟಿಲ ಮೇಲೆ ಶ್ಯಾವಿಗೆ ಒಣ ಹಾಕಿದ್ದು ಅಷ್ಟು ಘನಘೋರ ತಪ್ಪೇ ಎಂದು ಜನರು ಪ್ರಶ್ನಿಸಿದ್ದರು. 

Leave a Reply

Your email address will not be published. Required fields are marked *

error: Content is protected !!