ಆ ಮನುಷ್ಯನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ ಜೆಡಿಎಸ್ ಶಾಸಕ ವಿರುದ್ಧ ಹೆಚ್‍ಡಿಕೆ ಕಿಡಿ

ಬೆಂಗಳೂರು ಜೂ.10: ಆ ಮನುಷ್ಯನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ ಎಂದು ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವ ವಿಚಾರ ತಿಳಿದು ಬರುತ್ತಿದ್ದಂತೆ ಈ ಬಗ್ಗೆ ಮಾತನಾಡಿ ಅವರು, ಕೋಲಾರ ಜನತೆಯ ಜೆಡಿಎಸ್ ಮತದಾರರಿಗೆ ಅವರು ಅವಮಾನ ಮಾಡಿದ್ದಾರೆ. ನಮ್ಮ ಪಕ್ಷದ ಚಿಹ್ನೆ ಅಡಿ ಗೆದ್ದು, ಅವರಿಗೆ ಮತ ಹಾಕಿದ್ದಾರೆ. ಆ ಮನುಷ್ಯನಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‍ನವರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. 2016ರಲ್ಲಿ 8 ಶಾಸಕರ ಕೈಯಲ್ಲಿ ಅಡ್ಡ ಮತ ಹಾಕಿಸಿಕೊಂಡಿದ್ದರು. ಇದೀಗ ಶ್ರೀನಿವಾಸ್ ಗೌಡ ಅವರ ಕೈಯಲ್ಲಿ ಅಡ್ಡ ಮತ ಹಾಕಿಸಿಕೊಂಡಿದ್ದಾರೆ ಎಂದು ಟೀಕಿಸಿದರು. ಗುಬ್ಬಿ ಶ್ರೀನಿವಾಸ್ ಬಗ್ಗೆ ಮಾತನಾಡಿದ ಅವರು, ಗುಬ್ಬಿ ಶ್ರೀನಿವಾಸ್ ಯಾರಿಗೂ ಮತ ಹಾಕಿಲ್ಲ. ಖಾಲಿ ಪೇಪರ್ ಕೊಟ್ಟು ಹೋಗಿದ್ದಾರೆ. ಆದರೆ ಮಾಧ್ಯಮದ ಮುಂದೆ ಜೆಡಿಎಸ್‍ಗೆ ಮತ ಹಾಕಿದ್ದೇನೆ ಎಂದು ಹೇಳುತ್ತಿದ್ದಾರೆ. ಯಾಕೆ ಇಷ್ಟು ನಾಟಕವಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!