ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು: ಸಚಿನ್ ಸುವರ್ಣ

ಕಾಪು: ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ, ನೀಚ ಕೃತ್ಯವನ್ನು ಖಂಡಿಸುತ್ತೇನೆ.  ಬೆಂಗಳೂರಿನ ಕಾವಲ್ ಸಂದ್ರ ಪೊಲೀಸ್ ವಸತಿಗೃಹದ ಗೇಟ್ ಮುರಿದು ಪೊಲೀಸರ ಮನೆಗಳಿಗೆ ನುಗ್ಗಿ ಮಕ್ಕಳ, ಮಹಿಳೆಯರ ಮೇಲೆ ಹಲ್ಲೆ ಮಾಡಲು ಮುಂದಾದ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು.

ಕೈಯಲ್ಲಿ ಮಾರಕಾಯುಧಗಳನ್ನು ಹಿಡಿದು ಬಂದ ಮತಾಂಧ ಉಗ್ರರು ಪೊಲೀಸರ ವಾಹನಗಳನ್ನು ಪುಡಿ ಮಾಡಿ, ಬೆಂಕಿ ಹಚ್ಚಿ, ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿದ್ದು ಅಂತಹ ನೀಚರು ಈ ಭೂಮಿಯ ಮೇಲೆ ಬದುಕುವುದಕ್ಕೆ ಅರ್ಹರಲ್ಲ. ಈ ಒಂದು ಘಟನೆಯಿಂದ ಆದ ಹಾನಿಗಳನ್ನು ಹಾಗೂ ನಷ್ಟಗಳನ್ನು, ಘಟನೆಗೆ ಪ್ರಚೋದನೆ ನೀಡಿದ ಮತ್ತು ಈ ಘಟನೆಯಲ್ಲಿ ಭಾಗಿಯಾದವರಿಂದಲೆ ಬರಿಸುವ ಕೆಲಸ ವನ್ನು ಪೋಲೀಸ್ ಇಲಾಖೆ ಮತ್ತು ಕಾನೂನಿ ಮೂಲಕ ಮಾಡಬೇಕು.

ಅದೇ ರೀತಿ ಈ ಘಟನೆ ಸಮಯದಲ್ಲಿ ಆ ಘಟನೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿದ  ರಾಜ್ಯ ಪೊಲೀಸ್ ಇಲಾಖೆ ಮತ್ತು ರಾಜ್ಯ ಗೃಹ ಸಚಿವರಾದ ಬಸವರಾಜ ಬೊಮ್ಮಯಿರವರು ಹಾಗೂ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಕಾಪು ಬಿ‌.ಜೆ.ಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಸಚಿನ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!