ಕೆ.ಎಸ್ ಈಶ್ವರಪ್ಪ ಸಂಬಂಧಿ ಮನೆಯಲ್ಲಿ ವಿದೇಶಿ ಕರೆನ್ಸಿ ಸೇರಿದಂತೆ ಲಕ್ಷಾಂತ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

ಕುಣಿಗಲ್ ಜೂ.17: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಸಂಬಂಧಿಕರೊಬ್ಬರ ಮನೆಯಲ್ಲಿ ವಿದೇಶಿ ಕರೆನ್ಸಿ ಸೇರಿದಂತೆ ಲಕ್ಷಾಂತರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬಿಳಿದೇವಾಲಯ ಗ್ರಾಮದಲ್ಲಿ ಇಂದು ನಡೆದಿದೆ.

ಕಸಬಾ ಹೋಬಳಿ ಬಿಳಿದೇವಾಲಯ ಗ್ರಾಮದ ನಿವಾಸಿ ಪದ್ಮಾ ಸಿದ್ದೇಶ ಎಂಬವರು ಹಣ, ಒಡವೆ ಕಳೆದು ಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಮನೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಡೈಮಂಡ್ ಹಾಗೂ ಚಿನ್ನಾಭರಣ, ಒಂದು ಸಾವಿರ ಅಮೇರಿಕ ಡಾಲರ್, 5800 ಹಾಕಾಂಗ್ ಡಾಲರ್, ದುಬೈ ಜೀರಂ 3200 ಹಾಗೂ ಮೂರು ಲಕ್ಷ ರೂ. ನಗದು ಕಳವುಗೈದಿದ್ದಾರೆ.

ಪದ್ಮಾ ಸಿದ್ದೇಶ ಅವರ ಪತಿ ಕೊಬ್ಬರಿ ವ್ಯಾಪಾರಿಯಾಗಿದ್ದು, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕಳೆದ ಸುಮಾರು ಐದು ವರ್ಷದಿಂದ ಬಿಳಿದೇವಾಲಯ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪದ್ಮಾ ಅವರ ಪತಿ ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳಿದ್ದು, ಪದ್ಮಾ ಅವರು ಕೂಡಾ ತಮ್ಮ ಮಕ್ಕಳೊಂದಿಗೆ ಮೇ 23 ರಂದು ಶಿವಮೊಗ್ಗಕ್ಕೆ ಹೋಗಿದ್ದರು. ಆದರೆ ಬಳಿಕ ಜೂ.17 ರಂದು ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!