ಶಿವಮೊಗ್ಗ: ಆತ್ಮಹತ್ಯೆ ಆರೋಪ ಕೇಳಿ ಬಂದ ಬೆನ್ನಲ್ಲೇ ಸಚಿವ ಈಶ್ವರಪ್ಪರಿಂದ ಧಿಡೀರ್ ಸುದ್ದಿಗೋಷ್ಠಿ

ಶಿವಮೊಗ್ಗ ಎ.13 : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಂತೋಷ್ ನನಗೆ ಯಾರೆಂದೇ ಗೊತ್ತಿಲ್ಲ ಎಂದಿದ್ದ ಸಚಿವ ಈಶ್ವರಪ್ಪ ಅವರು ಇಂದು ಧಿಡೀರ್ ಸುದ್ದಿಗೋಷ್ಠಿ ಕರೆದಿದ್ದಾರೆ ಎಂದು ತಿಳಿದು ಬಂದಿದೆ

ಆತ್ಮಹತ್ಯೆ ಆರೋಪ ಕೇಳಿ ಬಂದ ಬೆನ್ನಲ್ಲೇ ಸಚಿವ ಈಶ್ವರಪ್ಪ ಇಂದು ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ಇದೀಗ ಈ ಹಿಂದೆ ಸಂತೋಷ್ ಯಾರೆಂದೇ ನನಗೆ ಗೊತ್ತಿಲ್ಲ ಎಂದಿದ್ದ ಸಚಿವರು ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ನೀಡುತ್ತಾರಾ..? ಅಥವಾ ಸಂತೋಷ್ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಾರ ಎನ್ನುವುದು ನೋಡಬೇಕಿದೆ.

ಗುತ್ತಿಗೆದಾರ ಸಂತೋಷ್ ಸಚಿವ ಈಶ್ವರಪ್ಪ ಅವರ ಮೇಲೆ 40% ಕಮಿಷನ್ ಆರೋಪ ಹಾಕಿ ಉಡುಪಿಯ ಖಾಸಗಿ ಹೊಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು,ಇದಾದ ಬಳಿಕ ಸಚಿವರ ರಾಜೀನಾಮೆಗೆ, ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ.

ಈ ನಡುವೆ ಮತ್ತೊಂದೆಡೆ ಘಟನೆಗೆ ಸಂಬಂಧಿಸಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬೆಂಬಲಿಸಿ ಶಿವಮೊಗ್ಗದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದು ನೂರಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!