ಕೊಡಗು: 4 ಸಾವಿರ ಕಿ.ಮೀ ಕ್ರಮಿಸಿ ಮತ್ತೇ ಗೂಡಿಗೆ ಮರಳಿದ ಕುಶ

ಕೊಡಗು ಜೂ.14 : ದುಬಾರೆಯ ಸಾಕಾನೆ ಕುಶನನ್ನು 4 ಸಾವಿರ ಕಿ.ಮೀ ಬಿಟ್ಟು ಬಂದಿದ್ರೂ ಮತ್ತೆ ತನ್ನ ಗೂಡಿಗೆ ನಡೆದುಕೊಂಡು ಬಂದು ಸೇರುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದೆ.

2021 ಜೂನ್ ತಿಂಗಳಲ್ಲಿ ದುಬಾರೆ ಸಾಕಾನೆ ಶಿಬಿರದಿಂದ ಬಂಡೀಪುರಕ್ಕೆ ಸ್ಥಳಾಂತರ ಮಾಡಿದ ಸಾಕನೆ ಮತ್ತೆ ಪ್ರತ್ಯಕ್ಷವಾಗಿದೆ. ಮೇಲಧಿಕಾರಿಗಳ ಸೂಚನೆ ಮೇರೆಗೆ ಸಾಕಾನೆ ಕುಶನನ್ನು ತಾನು ಹುಟ್ಟಿ ಬೆಳೆದ ಊರಿನಿಂದ ನೂರಾರು ಕಿಲೋಮೀಟರ್‍ನಷ್ಟು ದೂರ ಹೋಗಿ ಅರಣ್ಯ ಇಲಾಖೆಯ ಸಿಬ್ಬಂದಿ ಬಿಟ್ಟು ಬಂದಿದ್ರು. ಆದರೆ ಆ ಆನೆ ಬಂದು ಒಂದು ವರ್ಷ ಏಳು ದಿನಗಳಲ್ಲಿ ತಾನು ಹುಟ್ಟಿ ಬೆಳೆದ ಸಂಗತಿಗಳನ್ನು ನೆನಪು ಮಾಡಿಕೊಂಡು ಸಾವಿರಾರು ಕಿ.ಮೀ ನಡೆದುಕೊಂಡು ಬಂದು ಮತ್ತೆ ತಾನು ಇದ್ದ ಸ್ಥಳಕ್ಕೆ ತಲುಪಿದೆ. ಬಂಡೀಪುರದಿಂದ ದುಬಾರೆ ಕುಶಾ ಶಿಬಿರಕ್ಕೆ 4 ಸಾವಿರ ಕಿಲೋ ಮೀಟರ್ ಕ್ರಮಿಸಿ ಮರಳಿದೆ. ಕುಶಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಿದ ಹಿನ್ನೆಲೆಯಲ್ಲಿ ಅದರ ಚಲನವಲನ ಪತ್ತೆಯಾಗಿದೆ.

ಕುಶ ಶಿಬಿರದಲ್ಲಿದ್ದ ಸಂದರ್ಭ ಅಧಿಕಾರಿಗಳು ಮತ್ತು ಮಾವುತರು ತುಂಬಾ ಚೆನ್ನಾಗಿ ಆರೈಕೆ ಮಾಡಿದ ಹಿನ್ನೆಲೆಯಲ್ಲಿ ಅದನ್ನು ನೆನಪಿಸಿಕೊಂಡು ಶಿಬಿರಕ್ಕೆ ಮತ್ತೆ ಹಿಂತಿರುಗುವ ಮನಸ್ಸು ಮಾಡಿದೆ ಅನ್ನೋದು ಕೆಲವರ ಅಭಿಪ್ರಾಯ. 2016ರಲ್ಲಿ ಜಿಲ್ಲೆಯ ಚೆಟ್ಟಳ್ಳಿ ಅರಣ್ಯದಿಂದ ಹಿಡಿದು ಶಿಬಿರಕ್ಕೆ ತಂದ ಕುಶ ದುಬಾರೆ ಸಾಕಾನೆ ಶಿಬಿರ ಸೇರಿತ್ತು. 2017 ರ ನವೆಂಬರ್ ತಿಂಗಳಲ್ಲಿ ಏಕಾಏಕಿ ಕುಶಾ ಶಿಬಿರದಿಂದ ನಾಪತ್ತೆಯಾಗಿತ್ತು. ನಂತರ ಆನೆಯನ್ನು ಮರಳಿ ತರುವಲ್ಲಿ ದುಬಾರೆ ಸಾಕಾನೆ ಶಿಬಿರದ ಅಧಿಕಾರಿಗಳು ಸಿಬ್ಬಂದಿ ಹರ ಸಾಹಸಪಟ್ಟು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ವನ್ಯಜೀವಿ ಪ್ರೇಮಿ ಮನೇಕಾ ಗಾಂಧಿ ನೇತೃತ್ವದ ತಂಡದ ಆಗ್ರಹದಂತೆ ಸರ್ಕಾರ ಕುಶ ಆನೆಯನ್ನು ಅದರ ಇಚ್ಛೆಗೆ ವಿರುದ್ಧವಾಗಿ ಮತ್ತೆ ಅರಣ್ಯಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಸಿತ್ತು. ಆದರೆ ಅಂದು ಕುಶ ಅನೆ ವಲ್ಲದ ಮನಸ್ಸಿನಲ್ಲೇ ಬಂಡಿಪುರ ಅರಣ್ಯದಲ್ಲೇ ಸುತ್ತಾಡಿಕೊಂಡು ಇತ್ತು.

ವರ್ಷದ ಹಿಂದೆ ಕೆಲವು ವನ್ಯಜೀವಿ ಪ್ರೇಮಿಗಳ ಒತ್ತಾಯದಿಂದ ರಾಜ್ಯ ಸರ್ಕಾರ ಕುಶ ಎಂಬ ಆನೆಯನ್ನು ಅರಣ್ಯ ಇಲಾಖೆ ಮೂಲಕ ರೇಡಿಯೋ ಕಾಲರ್ ಅಳವಡಿಸಿ 2021 ಜೂನ್ ತಿಂಗಳಲ್ಲಿ ಬಂಡೀಪುರಕ್ಕೆ ಸ್ಥಳಾಂತರ ಮಾಡುವ ಕಾರ್ಯ ನಡೆಸಿತ್ತು. ಆದರೆ ಬಂಡೀಪುರದಲ್ಲಿ ನೆಲೆ ನಿಲ್ಲಲು ಇಚ್ಛಿಸದ ಕುಶ ಅಲ್ಲಿನ ಕೆಲವು ಸಂಗಡಿಗರೊಂದಿಗೆ ಕೇರಳ ಮೂಲಕ ಕೊಡಗಿನ ಗಡಿ ದಾಟಿ, ತಿತಿಮತಿ ದೊಡ್ಡಹರವೆ ಮೀಸಲು ಅರಣ್ಯ ಮಾರ್ಗವಾಗಿ ಇದೀಗ ಮಾಲ್ದಾರೆ ಸಮೀಪದ ದುಬಾರೆ ಶಿಬಿರದ ಸಮೀಪದಲ್ಲಿ ನೆಲೆಯೂರಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!