ನಟ ದಿಗಂತ್ ಗೆ ಗಂಭೀರ ಗಾಯ: ಹೆಚ್ಚಿನ ಚಿಕಿತ್ಸೆಗೆ ಗೋವಾ ದಿಂದ ಬೆಂಗಳೂರುಗೆ ಏರ್ ಲಿಫ್ಟ್

ಬೆಂಗಳೂರು ಜೂ.21 : ಗೋವಾದಲ್ಲಿ ಪ್ರವಾಸದಲ್ಲಿರುವ ಚಂದನವನದ ನಟ ದಿಗಂತ್ ಅವರಿಗೆ ಸಮ್ಮರ್ ಶಾಟ್ ಹೊಡೆಯುವ ವೇಳೆ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ದಿಗಂತ್ ತಮ್ಮ ಕುಟುಂಬದೊಂದಿಗೆ ಕೆಲ ದಿನಗಳ ಹಿಂದೆ ಗೋವಾಗೆ ಟ್ರಿಪ್ ಹೋಗಿದ್ದರು. ಈ ವೇಳೆ ಸಮುದ್ರ ತೀರದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಕ್ಷಣ ಅವರನ್ನು ಗೋವಾದ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ತುಸು ಚೇತರಿಸಿಕೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!