ಚಿತ್ರದುರ್ಗ ಕೋಟೆಯನ್ನ ಬರಿಗಾಲಿನಲ್ಲಿ ಏರಿದ ಮಂಗಳೂರು ಕಮಿಷನರ್ ಶಶಿಕುಮಾರ್

ಚಿತ್ರದುರ್ಗ: ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್​.ಶಶಿಕುಮಾರ್ ಅವರು ಚಿತ್ರದುರ್ಗದ ಕೋಟೆಯನ್ನು ಹತ್ತುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.

ಐಪಿಎಸ್​ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆ ಮೂಲದವರು. ಪ್ರಸ್ತುತ ಮಂಗಳೂರು ಪೊಲೀಸ್ ಕಮೀಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿಗೆ ಚಿತ್ರದುರ್ಗಕ್ಕೆ ಭೇಟಿ ಕೊಟ್ಟಿದ್ದ ಶಶಿಕುಮಾರ್​ ಅವರು, ಬರಿಗಾಲಿನಲ್ಲೇ ಚಿತ್ರದುರ್ಗದ ಕಲ್ಲಿನ ಕೋಟೆ ಮೇಲೆ ಹತ್ತಿದ್ದು, ಆ ವಿಡಿಯೋವನ್ನು ‘ನಮ್ಮ ಚಿತ್ರದುರ್ಗ ನಮ್ಮ ಹೆಮ್ಮೆ’ ಎಂಬ ಬರಹದೊಂದಿಗೆ ಫೇಸ್​ಬುಕ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಕೋತಿರಾಜ್ ಥರಾ ಸರಸರನೆ ಚಿತ್ರದುರ್ಗ ಕೋಟೆಯ ಕಲ್ಲಿನ ಗೋಡೆಯನ್ನು ಐಪಿಎಸ್​ ಅಧಿಕಾರಿ ಹತ್ತುತ್ತಿರುವ ದೃಶ್ಯ ನೋಡಿದ ಅಭಿಮಾನಿಗಳು ಮತ್ತು ಚಿತ್ರದುರ್ಗದ ಜನತೆ ಮೆಚ್ಚುಗೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!