ಧರ್ಮಸ್ಥಳ: ಸೂರ್ಯಗ್ರಹಣ ಹಿನ್ನೆಲೆ- ಅ.25 ರಂದು ಭಕ್ತರಿಗಿಲ್ಲ ದೇವರ ದರ್ಶನ

ಬೆಳ್ತಂಗಡಿ, ಅ.19 : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಅ.25 ರಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ದೇವಸ್ಥಾನದ ಆಡಳಿತ ಮಂಡಳಿ, ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇದರೊಂದಿಗೆ ಭೋಜನ ಪ್ರಸಾದವೂ ಮಧ್ಯಾಹ್ನ 2.30 ಕ್ಕೆ ಕೊನೆಗೊಂಡು ರಾತ್ರಿ 7.30 ರ ನಂತರವೇ ನಡೆಯಲಿದೆ. ಹಾಗೂ ಅ.25 ರಂದು ಸಂಜೆ 5.11ಕ್ಕೆ ಗ್ರಹಣ ಸ್ವರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. ಅ. 26 ರಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!