ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ-ಸಿಎಂ ಬಿಎಸ್‌ವೈ ಮನವಿ

ಬೆಂಗಳೂರು: ಕರ್ನಾಟಕ ಬಂದ್ ಬಂದ್ ಮಾಡಿ ಜನರಿಗೆ ತೊಂದರೆ ಕೊಡುವ ಕೆಲಸ ಮಾಡಬೇಡಿ. ಬಂದ್ ಮಾಡುವ ಅವಶ್ಯಕತೆ ಇಲ್ಲ ಹಾಗಾಗಿ ಡಿ.5 ರ ಕರ್ನಾಟಕ ಬಂದ್‌ಗೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕುರಿತಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಸಮಾಜವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕಾರ್ಯ ಮಾಡುತ್ತೇವೆ. ಬಂದ್ ಮಾಡಿದರೆ ಜನರ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗುತ್ತದೆ ಎಂದ ಅವರು, ಬಂದ್ ಹಿಂಪಡೆಯುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕೊರೊನಾದ ಎರಡನೇ ಅಲೆ ಹಿನ್ನೆಲೆ ರಾತ್ರಿ ಕರ್ಫ್ಯೂ ಜಾರಿ ವಿಚಾರದ ಬಗ್ಗೆ ಯಾವುದೇ ರೀತಿಯಾದ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!