ಶಿಂಧೆ ಬಣದಲ್ಲಿ ಬಿರುಕು : 22 ಶಾಸಕರು ಬಿಜೆಪಿಗೆ..?

ಮುಂಬೈ ಅ.24 : ಶಿವ ಸೇನೆಯ ಏಕನಾಥ್ ಶಿಂಧೆ ನೇತೃತ್ವದ ಬಣದಲ್ಲಿ ಬಿರುಕು ಬಿಟ್ಟಿದ್ದು, 40 ಶಾಸಕರ ಪೈಕಿ 22 ಶಾಸಕರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ತನ್ನ ಸಾಪ್ತಾಹಿಕ ಮುಖವಾಣಿ ಸಾಮ್ನಾದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿದ್ದು ಬಿಜೆಪಿ ಮಾಡಿದ ‘ತಾತ್ಕಾಲಿಕ ವ್ಯವಸ್ಥೆ’. “ಅವರ ಮುಖ್ಯಮಂತ್ರಿ ಸಮವಸ್ತ್ರವನ್ನು ಯಾವಾಗ ಬೇಕಾದರೂ ತೆಗೆಯಲಾಗುವುದು ಎಂದು ಈಗ ಎಲ್ಲರಿಗೂ ಅರ್ಥವಾಗಿದೆ. ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ ಶಿಂಧೆ ಅವರ ಗುಂಪು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ಆದರೆ ಅದನ್ನು ತಪ್ಪಿಸಿದ್ದು ಬಿಜೆಪಿ” ಎಂದು ಸಾಮ್ನಾದಲ್ಲಿನ ರೋಕ್ ಥೋಕ್ ಅಂಕಣದಲ್ಲಿ ಹೇಳಲಾಗಿದೆ.

“ಮಹಾರಾಷ್ಟ್ರದ ಗ್ರಾಮ ಪಂಚಾಯಿತಿ ಮತ್ತು ಸರಪಂಚ್ ಚುನಾವಣೆಯಲ್ಲಿ ಶಿಂಧೆ ಬಣದ ಯಶಸ್ಸಿನ ಹೇಳಿಕೆ ಸುಳ್ಳು. ಶಿಂಧೆ ಗುಂಪಿನ ಕನಿಷ್ಠ 22 ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಬಹುಪಾಲು ಶಾಸಕರು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದ್ದಾರೆ”, ಶಿಂಧೆಯವರು ತನಗೆ ಮತ್ತು ಮಹಾರಾಷ್ಟ್ರಕ್ಕೆ ದೊಡ್ಡ ಹಾನಿಯನ್ನು ಉಂಟು ಮಾಡಿದ್ದಾರೆ. ರಾಜ್ಯವು ಅವರನ್ನು ಕ್ಷಮಿಸುವುದಿಲ್ಲ. ಬಿಜೆಪಿ ತಮ್ಮ ಲಾಭಕ್ಕಾಗಿ ಶಿಂಧೆ ಅವರನ್ನು ಇನ್ನೂ ಬಳಸಿಕೊಳ್ಳುತ್ತದೆ’ ಎಂದು ಅಂಕಣದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!