ರೈತರ ಪ್ರತಿಭಟನೆ: ತುಕುಡೇ ಗ್ಯಾಂಗ್‌ನವರು ಭಾರತವನ್ನು ಇಬ್ಭಾಗ ಮಾಡುವ ಕೆಲಸ – ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ದೇಶದ ಹೊರಗೆ ಕುಳಿತ ಉಗ್ರ ಸಂಘಟನೆಗಳು ಭಾರತವನ್ನು ಇಬ್ಭಾಗ ಮಾಡಲು ರೈತರನ್ನು ಎತ್ತಿಗಟ್ಟುವ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿವೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ದೇಶದಾದ್ಯಂತ ಕರೆ ನೀಡಿರುವ ಬಂದ್ ಕುರಿತಂತೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಇವತ್ತಿನ ಬಂದ್ ಕೇವಲ ರೈತರು ನಡೆಸುತ್ತಿರುವ ಬಂದ್ ಅಲ್ಲ. ಇದು ರೈತರನ್ನ ದಿಕ್ಕು ತಪ್ಪಿಸುವಂಥ ರಾಜಕೀಯ ಪಕ್ಷಗಳ ಬಂದ್. ಮೋದಿ ಸರ್ಕಾರದ ವಿರೋಧದ ಬಂದ್ ಎಂದು ಹೇಳಿದ್ದಾರೆ.

ಶಾಯಿನ್ ಭಾಗ್‌ನಲ್ಲಿ ಭಾಗವಹಿಸಿದ ತುಕುಡೇ ಗ್ಯಾಂಗ್‌ನವರು ಈ ಹೋರಾಟದಲ್ಲಿದ್ದಾರೆ ಎಂದ ಅವರು, ಸಿಎಎ, ಖಲಿಸ್ತಾನ್ ಹೋರಾಟದಲ್ಲಿದ್ದವರ ಮಾತು ಕೇಳಲು ಕೇಂದ್ರ ಸರ್ಕಾರ ಸಿದ್ಧವಿಲ್ಲ. ದೇಶದ ಹೊರಗಿರುವ ಉಗ್ರ ಸಂಘಟನೆಗಳು ಭಾರತದ ಸೈನಿಕರೇ ದೇಶದ ವಿರುದ್ಧ ತಿರುಗಿ ಬೀಳುವಂತೆ ಪ್ರಚೋದಿಸುತ್ತಿದ್ದು, ಈ ರೀತಿಯ ವಾಯ್ಸ್ ಮೆಸೇಜ್‌ಗಳು ಸಂಸತ್ ಸದಸ್ಯರಿಗೆ ತಲುಪುತ್ತಿವೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!