ಪಂಜುರ್ಲಿ ವೇಷ ತೊಟ್ಟು ರೀಲ್ಸ್ : ಧರ್ಮಸ್ಥಳದಲ್ಲಿ ಕ್ಷಮೆ ಯಾಚಿಸಿದ ಯುವತಿ
ಧರ್ಮಸ್ಥಳ ನ.4: ಕಾಂತಾರ ಸಿನೆಮಾದ ಪಂಜುರ್ಲಿ ದೈವದ ವೇಷ ಧರಿಸಿ ರೀಲ್ಸ್ ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಧರ್ಮಸ್ಥಳಕ್ಕೆ ಆಗಮಿಸಿ ತನ್ನ ತಪ್ಪಿನ ಬಗ್ಗೆ ಕ್ಷಮೆ ಯಾಚಿಸಿದ್ದಾಳೆ ಎಂದು ತಿಳಿದು ಬಂದಿದೆ.
ದೇವಸ್ಥಾನಕ್ಕೆ ಭೇಟಿ ನೀಡಿದ ಯುವತಿ ಕ್ಷಮೆ ಯಾಚಿಸಿ ತಪ್ಪೋಪ್ಪಿಗೆ ಕಾಣಿಕೆ ಹಾಕಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ಮೇಕಪ್ ಆರ್ಟಿಸ್ಟ್ ಆಗಿರುವ ಶ್ವೇತಾ ರೆಡ್ಡಿ ಎಂಬ ಯುವತಿ ಕಾಂತಾರ ಸಿನೆಮಾದಲ್ಲಿ ಬರುವ ಪಂಜುರ್ಲಿ ದೈವದ ರೀತಿ ಮೇಕಪ್ ಮಾಡಿಕೊಂಡು, ದೈವದ ರೀಲ್ ಮಾಡಿ, ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ಈ ಪೋಸ್ಟ್ ವೈರಲ್ ಆಗಿ ಯುವತಿಯ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ವ್ಯಾಪಕ ಆಕ್ರೋಶದ ಬಳಿಕ ಇನ್ಸ್ಟಾಗ್ರಾಮ್ ಖಾತೆಯಿಂದ ಯುವತಿ ರೀಲ್ಸ್ ಡಿಲೀಟ್ ಮಾಡಿದ್ದಳು.