ಮಂಗಳೂರು: ನ.6-ಪ್ರಸಾದ್ ನೇತ್ರಾಲಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ
ಮಂಗಳೂರು ನ.4 (ಉಡುಪಿ ಟೈಮ್ಸ್ ವರದಿ) : ಇಲ್ಲಿನ ಉಜ್ಜೋಡಿಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಕೇಂದ್ರದಲ್ಲಿ `ಲಾಸಿಕ್ ಸ್ಮೈಲ್ ಮತ್ತು ಪಿ.ಆರ್.ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ನ.6 ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.
ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದ್ದು, ಈ ಶಿಬಿರದಲ್ಲಿ 18 ವರ್ಷದಿಂದ ಸುಮಾರು 50 ವರ್ಷದವರೆಗಿನವರಿಗೆ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ. ಶಿಬಿರದಲ್ಲಿ ಚಿಕಿತ್ಸೆಗೆ ಅರ್ಹವಾದ ರೋಗಿಗಳಿಗೆ ಲೇಸರ್ ಚಿಕಿತ್ಸೆಯನ್ನು ವಿಶೇಷ ರಿಯಾಯಿತಿ ದರದಲ್ಲಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅತೀ ಹೆಚ್ಚಿನ ರಿಯಾಯಿತಿ ದರದಲ್ಲಿ ನಡೆಸಲಾಗುವುದು. ದೃಷ್ಟಿ ಪರೀಕ್ಷೆ, ಕಣ್ಣಿನ ನರ ಪರೀಕ್ಷೆ, ಟೋಪೋಗ್ರಫಿ ಸ್ಕ್ಯಾನ್ (ಶಸ್ತ್ರ ಚಿಕಿತ್ಸೆಗೆ ಮೊದಲು ಮಾಡುವ ಪರೀಕ್ಷೆ) ಮೊದಲಾದ ಸೌಲಭ್ಯಗಳನ್ನು ಶಿಬಿರದಲ್ಲಿ ಉಚಿತವಾಗಿ ಒದಗಿಸಲಾಗುವುದು.
ಈ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್ ಲೆನ್ಸ್ ನಿಂದ ಮುಕ್ತಿ ಹೊಂದಬಹುದಲ್ಲದೇ 5 ನಿಮಿಷಗಳಲ್ಲಿ ಪರಿಶುದ್ಧವಾದ ದೃಷ್ಟಿಯನ್ನು ಪಡೆಯಬಹುದು. ಚಿಕಿತ್ಸೆಯ ನಂತರ ಕೂಡಲೇ ರೋಗಿಯು ತನ್ನೆಲ್ಲಾ ದೈನಂದಿನ ಚಟುವಟಿಕೆಗಳನ್ನು ಮಾಡಬಹುದು. ಯಾವುದೇ ನೋವು ಈ ಚಿಕಿತ್ಸೆಯಿಂದ ಉಂಟಾಗುವುದಿಲ್ಲ ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.