ಮಂಗಳೂರು : ಕೋಳಿ ಸಾಕಣೆಗಾರರಿಗೆ ರಾಜ್ಯ ಸರಕಾರದಿಂದ ಗುಡ್ ನ್ಯೂಸ್

ಬೆಂಗಳೂರು, ನ.7 : ಕೃಷಿ ಜಮೀನನ್ನು ಇತರ ಉದ್ದೇಶಗಳಿಗೆ ಉಪಯೋಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೋಳಿ ಸಾಕಾಣಿಕೆಗಾಗಿ ಉಪಯೋಗಿಸುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ಸರಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961ರ ಕಲಂ 2-(ಎ)(1)(ಡಿ)ರಲ್ಲಿ ಕೋಳಿ ಸಾಕಣೆ (ಕೋಳಿ ಫಾರಂ)ಯನ್ನು “ಕೃಷಿ” ಎಂದು ವ್ಯಾಖ್ಯಾನಿಸಲಾಗಿರುವುದರಿಂದ ಕೋಳಿ ಸಾಕಾಣಿಕೆಗೆ ಬಳಕೆಯಾಗುವ ಜಮೀನಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರಡಿ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 (2)ರಡಿ ಬೇಸಾಯದ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯನ್ನು ಅಥವಾ ಅದರ ಯಾವುದೇ ಭಾಗವನ್ನು ಯಾವುದೇ ಇತರ ಉದ್ದೇಶಕ್ಕಾಗಿ ಬದಲಿಸಲು ಇಚ್ಛಿಸಿದರೆ ಅನುಮತಿಗಾಗಿ ಜಿಲ್ಲಾಧಿಕಾರಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!