ಶಿವಮೊಗ್ಗ : ಹುಲಿಕಲ್ ಘಾಟಿಯಲ್ಲಿ ಬೈಕ್ ಗೆ ಲಾರಿ ಡಿಕ್ಕಿ: ಮಗು ಸಹಿತ ಇಬ್ಬರು ಮೃತ್ಯು

ಶಿವಮೊಗ್ಗ ನ.11 :  ಬೈಕ್ ಗೆ ಲಾರಿ ಡಿಕ್ಕಿ ಹೊಡೆದು ಮೂರು ವರ್ಷದ ಮಗು ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯ ಲಕ್ಷ್ಮೀ ನರಸಿಂಹ ದೇವಸ್ಥಾನ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. 

ಮಾಸ್ತಿಕಟ್ಟೆಯ ಕಂಪನ ಕೈನ ರವಿ ಹಾಗೂ ಅವರ ಅಣ್ಣನ ಮೂರು ವರ್ಷದ ಮಗು ಸ್ಥಳದಲ್ಲಿಯೇ ಮೃತಪಟ್ಟವರು.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ  ಬಳಿಕ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!