ಕಾಲುವೆಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋದ ಒಂದೇ ಕುಟುಂಬದ 5 ಮಂದಿ ನೀರುಪಾಲು

ಕಚ್ ನ.15 : ನರ್ಮದಾ ನಾಲೆಯಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯೊಬ್ಬರನ್ನು ರಕ್ಷಿಸಲು ಹೋದ ಒಂದೇ ಕುಟುಂಬದ ಐದು ಮಂದಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಡೆದಿದೆ.

ಕಚ್‍ ನ ಮುಂದ್ರಾದ ಗುಂಡಾಲಾ ಗ್ರಾಮದ ನರ್ಮದಾ ಕಾಲುವೆಗೆ ನೀರು ತರಲು ಹೋಗಿದ್ದ ವೇಳೆ ಮಹಿಳೆಯೊಬ್ಬರು ಜಾರಿ ನೀರಿಗೆ ಬಿದ್ದಾಗ ಅವರನ್ನು ರಕ್ಷಿಸಲು ಹೋದ ಒಂದೇ ಕುಟುಂಬದ ಐದು ಮಂದಿ ಮುಳುಗಿ ನೀರು ಪಾಲಾಗಿದ್ದಾರೆ. ದುರಂತದಲ್ಲಿ ಮೃತಪಟ್ಟ ಎಲ್ಲರ ಮೃತದೇಹದ ಗಳು ಪತ್ತೆಯಾಗಿದೆ ಎಂದು ಕಚ್ ಪಶ್ಚಿಮ ಎಸ್ಪಿ ಸೌರಭ್ ಸಿಂಗ್ ಹೇಳಿದ್ದಾರೆ ಎಂಬುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!