ಗ್ರಾಮ ಪಂಚಾಯತ್ ಚುನಾವಣೆಯಂದೇ ಅಭ್ಯರ್ಥಿ ಆತ್ಮಹತ್ಯೆಗೆ ಶರಣು

ಧಾರವಾಡ: ಗ್ರಾಮ ಪಂಚಾಯತ್ ಚುನಾವಣೆಯಂದೇ ಕಣದಲ್ಲಿದ್ದ ಅಭ್ಯರ್ಥಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಗರಗ ಗ್ರಾಮದ 2ನೇ ವಾರ್ಡ್ನ ಅಭ್ಯರ್ಥಿ ದಾಮೋದರ ಯಲಿಗಾರ (25) ಎಂದು ಗುರುತಿಸಲಾಗಿದೆ.
ಇಲ್ಲಿನ ಗರಗ ಗ್ರಾಮ ಪಂಚಾಯಿತಿಗೆ ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದೆ. ಈ ನಡುವೆ ಈ ಗ್ರಾಮದ 2 ನೇ ವಾರ್ಡ್ ನ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸುದ್ಧಿ ವರದಿಯಾಗಿದೆ. ಇನ್ನು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಆದರೆ ಚುನಾವಣೆಯ ಕಾರಣದಿಂದ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಚರ್ಚೆ ಗ್ರಾಮದಲ್ಲಿ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!