ಶಂಕರನಾರಾಯಣ: ಮೊಬೈಲ್ ಚಾರ್ಜ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಯುವಕ ಸಾವು
ಶಂಕರನಾರಾಯಣ ನ.16: ಯುವಕನೋರ್ವ ಮೊಬೈಲ್ ಚಾರ್ಜ್ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ.
ಉತ್ತರ ಪ್ರದೇಶ ರಾಜ್ಯದ ದೇವಾನಿಯ ಜಿಲ್ಲೆಯ ನಿವಾಸಿ ವಸಿಷ್ಠ ಪಾಸ್ವಾನ್ (34) ಮೃತ ದುರ್ದೈವಿ.
ಇವರು ತಮ್ಮ ಸಂಬಂಧಿಕರಾದ ವಿಫಿನ್ ಹಾಗೂ ರಾಮಾನಿ ಎಂಬವರೊಂದಿಗೆ ಕೆಲಸಕ್ಕಾಗಿ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮಕ್ಕೆ ಬಂದಿದ್ದರು. ಇಲ್ಲಿ ಕೆಲಸ ಮಾಡಿಕೊಂಡಿದ್ದ ವಸಿಷ್ಠ ಅವರು, ನ.14 ರಂದು ರಾತ್ರಿ 8 ಗಂಟೆಗೆ ಅಲ್ಲಿಯೇ ಇದ್ದ ತೋಟದ ಪಂಪಸೆಟ್ ಶೆಡ್ನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದರು. ಈ ವೇಳೆ ಚಾರ್ಜ್ ಹಾಕುತ್ತಿದ್ದ ವೇಳೆ ಅವರಿಗೆ ಕರೆಂಟ್ ಶಾಕ್ ಹೊಡೆದಿದ್ದು, ಕೂಡಲೇ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅದಾಗಲೇ ವಸಿಷ್ಠ ಅವರು ಮೃತಪಟ್ಟಿದ್ಧಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.