ಕುಂದಾಪುರ: ಅನಾರೋಗ್ಯದಿಂದ ನೊಂದು ವ್ಯಕ್ತಿ ಆತ್ಮಹತ್ಯೆ
ಕುಂದಾಪುರ ನ.16( ಉಡುಪಿ ಟೈಮ್ಸ್ ವರದಿ) : ತಮಗಿದ್ದ ಅನಾರೋಗ್ಯದಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ವಡೇರಹೋಬಳಿ ಗ್ರಾಮದಲ್ಲಿ ನಡೆದಿದೆ.
ಅಜಿತ್ (35 ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಇವರು ಕುಂದಾಪುರದ ಶ್ರೀ ರಾಮ ಟ್ರಾನ್ಸ್ ಪೋರ್ಟ್ ಏಜೆನ್ಸಿಯಲ್ಲಿ ಕೆಲಸ ಮಾಡಿಕೊಂಡಿದ್ದು ಸುಮಾರು 2 ವರ್ಷಗಳಿಂದ ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಟಿಟಿ ರೋಡ್ ನ ಆಶ್ರಯ ಕಾಲೋನಿಯಲ್ಲಿ ಸುರೇಶ್ ಮೊಗವೀರ ಎಂಬವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರಿಗೆ ಸಕ್ಕರೆ ಖಾಯಿಲೆ ಮತ್ತು ಅಧಿಕ ರಕ್ತದೊತ್ತಡ ಖಾಯಿಲೆ ಇದ್ದ ಕಾರಣ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆ ಗೊಂಡು ನ.15 ರ ರಾತ್ರಿಯಿಂದ ನ.16 ರ ಬೆಳಿಗ್ಗೆನ ಮಧ್ಯಾವಧಿಯಲ್ಲಿ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮೃತರ ಅಣ್ಣ ಅನಿಲ್ ಕುಮಾರ್ ಅವರು ನೀಡಿದ ಮಾಹಿತಿಯಂತೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.