ಮುಖ್ಯಮಂತ್ರಿ ಕಚೇರಿಯಲ್ಲಿ ಕಡತ ಕಳವು?

ಬೆಂಗಳೂರು, ನ.26 : ಮುಖ್ಯಮಂತ್ರಿ ಕಚೇರಿಗೆ ಹಿರಿಯ ಅಧಿಕಾರಿಯೊಬ್ಬರು ಕಳುಹಿಸಿದ್ದ ಜಾಹೀರಾತು ಯೋಜನೆ ಸಂಬಂಧಿಸಿದ ಕಡತವೇ ಕಳವು ಆಗಿದೆ ಎಂಬ ಬಗ್ಗೆ ವರದಿಯಾಗಿದೆ.

ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿ ಕಚೇರಿಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ‘ಒಂದು ವರ್ಷದಿಂದ ಕಡತ ಕೈ ಸೇರಿಲ್ಲ’ ಎಂದು ಉಲ್ಲೇಖ ಮಾಡಿದ್ದಾರೆ.

ಹಾಗೂ 2021ನೇ ಸಾಲಿನ ಡಿಸೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಕಚೇರಿಗೆ ಕಡತ ಸಲ್ಲಿಕೆ ಮಾಡಲಾಗಿತ್ತು. ಆದರೆ, ಇದುವರೆಗೂ ಈ ಕಡತ ಇಲಾಖೆಗೆ ಹಿಂದಿರುಗಿಲ್ಲ. ಜತೆಗೆ, ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ಮಾಹಿತಿ ಸಲ್ಲಿಸಬೇಕಾಗಿರುವ ಕಾರಣ, ಯಥಾ ಹಿಂದಿರುಗಿಸುವಂತೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!