‘ಮುರುಘಾ ಶ್ರೀ’ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂ. ಆಮಿಷ – ಪರಶುರಾಂ ಸ್ಪೋಟಕ ಹೇಳಿಕೆ

ಮೈಸೂರು, ನ.26 : ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿ ಜೈಲುಪಾಲಾಗಿರುವ “ಮುರುಘಾ ಶ್ರೀ ಶರಣರ ವಿರುದ್ಧದ ಪ್ರಕರಣದಿಂದ ಹಿಂದೆ ಸರಿಯುವಂತೆ ಮೂರು ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು” ಎಂದು ಒಡನಾಡಿ ಸಂಸ್ಥೆಯ ಪರಶುರಾಂ ಅವರು ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ನ.25 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪರಶುರಾಂ ಅವರು `ಪೋಕ್ಸೋ ಪ್ರಕರಣದಿಂದ ಹಿಂದೆ ಸರಿಯುವಂತೆ ಮೂರು ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು, ಹಾಗೂ ಸಚಿವರೊಬ್ಬರು ಸ್ವಾಮೀಜಿಯವರನ್ನು ಬಿಟ್ಟುಬಿಡಿ ಎಂದು ನಮಗೆ ಹೇಳಿದ್ದರು’ ಎಂದು ಆರೋಪಿಸಿದ್ದಾರೆ.

‘ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್‍ಜೆಎಂ) ಬೃಹನ್ಮಠ’ದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕೆ ಪೋಕ್ಸೊ ಮತ್ತು ಎಸ್ಸಿ-ಎಸ್ಟಿ ಜಾತಿನಿಂದನೆ ಆರೋಪದಡಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!