ಬೈಂದೂರು: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬೈಂದೂರು ನ.26 (ಉಡುಪಿ ಟೈಮ್ಸ್ ವರದಿ): ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪಾರ್ವತಿ (44) ಆತ್ಮಹತ್ಯೆ ಮಾಡಿಕೊಂಡವರು.

ಪಾರ್ವತಿಯವರು ಸುಮಾರು 13 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇದ್ದು, ಈ ಹಿಂದೆ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ನ.25 ರಂದು ಸಂಜೆ ಪಾರ್ವತಿ ಅವರು ಮನೆಯಲ್ಲಿ ಇಲ್ಲದೇ ಇದ್ದೂದನ್ನು ಕಂಡು ಅವರ ಅಣ್ಣ ನರಸಿಂಹ ಪೂಜಾರಿ ಅವರು ಹುಡುಕಾಡಿದಾಗ ಪಾರ್ವತಿ ಅವರು ಬಾವಿಯ ನೀರಿನಲ್ಲಿ ಮುಳುಗಿ ಒದ್ದಾಡುತ್ತಿರುವುದನ್ನು ಕಂಡು ಇತರರ ಸಹಕಾರದೊಂದಿಗೆ ಪಾರ್ವತಿಯವರನ್ನು ಮೇಲಕ್ಕೆ ಎತ್ತಿ ನೋಡಿದಾಗ ಅವರು ಮೃತ ಪಟ್ಟಿರುವುದು ತಿಳಿದು ಬಂದಿದೆ. ಈ ಬಗ್ಗೆ ನರಸಿಂಹ ಪೂಜಾರಿ ಅವರು ನೀಡಿದ ಮಾಹಿತಿಯಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!