ಮಂಗಳೂರು: ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಪ್ರಯಾಣಿಕರು ಪಾರು

ಮಂಗಳೂರು, ನ.26 : ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಬಲ್ಮಠ ಜಂಕ್ಷನ್ ಬಳಿ ಇಂದು ಮಧ್ಯಾಹ್ನ ನಡೆದಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಮಹಿಳೆಯರ ಸಹಿತ ಕೆಲವರು ಕುಳಿತಿದ್ದರು. ಅದೃಷ್ಟಾವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಮಧ್ಯಾಹ್ನ ಸುಮಾರು 1:15ರ ವೇಳೆಗೆ ಕಾರಿನ ಇಂಜಿನ್‍ನಲ್ಲಿ ದಟ್ಟವಾದ ಹೊಗೆ ಬರಲಾರಂಭಿಸಿತು ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಪರಿಸರವಿಡೀ ದಟ್ಟ ಹೊಗೆಯಿಂದ ಆವೃತವಾಗಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗವು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಶಾರ್ಟ್ ಸಕ್ರ್ಯೂಟ್‍ನಿಂದ ಅಗ್ನಿ ಅನಾಹುತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಕಾರಿನ ಇಂಜಿನ್ ಭಾಗ ಬಹುತೇಕ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಟ್ರಾಫಿಕ್ ಎಸಿಪಿ ಗೀತಾ ಕುಲಕರ್ಣಿ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!