ಉಡುಪಿ: ರಸ್ತೆ ತೇಪೆ ಕಾಮಗಾರಿಯಲ್ಲೂ ಕಳಪೆ- ಸಾರ್ವಜನಿಕರ ಆಕ್ರೋಶ

ಉಡುಪಿ, ನ.28  (ಉಡುಪಿ ಟೈಮ್ಸ್ ವರದಿ) : ತಾಲೂಕಿನ ಹಲವು ಕಡೆಗಳಲ್ಲಿ ಹದಗೆಟ್ಟಿರುವ ರಸ್ತೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಬೀಡಿನ ಗುಡ್ಡೆಯಿಂದ ಶಾರದ ಕಲ್ಯಾಣ ಮಂಟಪ ಸಂಪರ್ಕಿಸುವ ರಸ್ತೆಯಲ್ಲಿ ಕೈಗೊಂಡಿರುವ ಕಳಪೆ ಕಾಮಗಾರಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೀಡಿನ ಗುಡ್ಡೆಯಿಂದ ಶಾರದ ಕಲ್ಯಾಣ ಮಂಟಪ ಸಂಪರ್ಕಿಸುವ ರಸ್ತೆಯಲ್ಲಿ ಬರುವ ನಿರಾಶ್ರಿತರ ಪುರ್ನವಸತಿ ಕೇಂದ್ರದ ಬಳಿಯ ತಿರುವು ರಸ್ತೆಯಲ್ಲಿ ಹೊಂಡ ಗುಂಡಿಗಳಿಗೆ ತೇಪೆ ಹಾಕಿದ್ದು, ರಸ್ತೆಗೆ ಹಾಕಲಾಗಿರುವ ತೇಪೆಯ ಡಾಂಬರು ಮಿಶ್ರಣ ಸರಿ ಪ್ರಮಾಣದಲ್ಲಿಲ್ಲದೇ ತೇಪೆಗಳು ಎದ್ದೇಳುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಇದು ಕಳಪೆ ಕಾಮಗಾರಿ ಎಂದು ಸಾರ್ವಜನಿಕರು ದೂರಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು, ಕೆಲವು ವರ್ಷಗಳಿಂದ ನಿರಾಶ್ರಿತರ ಪುರ್ವಸತಿ ಕೇಂದ್ರದ ಬಳಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಲೇ ಇರುತ್ತದೆ. ಹಾಕಿದ ತೇಪೆ ಕಳಪೆ ಕಾಮಗಾರಿಯಿಂದಾಗಿ ಒಂದು ತಿಂಗಳು ಸರಿಯಾಗಿ ನಿಲ್ಲುವುದಿಲ್ಲ. ಮತ್ತೆ ಯಥಾಪ್ರಕಾರ ಗುಂಡಿಗಳು ಸೃಷ್ಟಿಯಾಗುತ್ತಲೇ ಇರುತ್ತವೆ. ಸಾರ್ವಜನಿಕರ ಹಣ ವ್ಯರ್ಥವಾಗುತ್ತಿದ್ದು. ಈ ಬಗ್ಗೆ ನಗರಸಭೆ ಶಾಶ್ವತ ಪರಿಹಾರ ಕಂಡು ಕೊಳ್ಳಬೇಕಾಗಿದೆ. ಹಾಗೂ ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವೇ ಸೂಕ್ತ ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!