ಹೆಬ್ರಿ : ನಾಪತ್ತೆಯಾಗಿದ್ದ ವ್ಯಕ್ತಿ ಮೃತದೇಹ ಆತ್ಮಹತ್ಯೆ ಮಾಕೊಂಡ ಸ್ಥಿತಿಯಲ್ಲಿ ಪತ್ತೆ

ಹೆಬ್ರಿ ನ.28 (ಉಡುಪಿ ಟೈಮ್ಸ್ ವರದಿ): ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಹೆಬ್ರಿ ಠಾಣಾ ವ್ಯಾಪ್ತಿಯ ಕಳ್ತೂರು ಗ್ರಾಮದ ಜಡ್ಡುಬೈಲು ಎಂಬಲ್ಲಿನ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ರವಿ ನಾಯ್ಕ (38) ಆತ್ಮಹತ್ಯೆ ಮಾಡಿಕೊಂಡವರು.

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಇವರು, ಚಿಕಿತ್ಸೆ ಪಡೆದರೂ ಗುಣಮುಖರಾಗಿರುವುದಿಲ್ಲ. ರವಿನಾಯ್ಕ್ ನ.19 ರಂದು ಸಂಜೆ ತನ್ನ ಹುಳುಕಜ್ಜಿಯ ಚಿಕಿತ್ಸೆಗಾಗಿ ಹೆಬ್ರಿಯ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು. ಬಳಿಕ ಅವರು ವಾಪಸ್ಸು ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು.

ಆದರೆ ನ.27 ರಂದು ಸಂಜೆ ಕಳ್ತೂರು ಗ್ರಾಮದ ಜಡ್ಡುಬೈಲು ಎಂಬಲ್ಲಿನ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸಂಪೂರ್ಣ ಕೊಳೆತ ರವಿ ನಾಯ್ಕ ಅವರ ಮೃತದೇಹ ಪತ್ತೆಯಾಗಿದೆ.

ರವಿನಾಯ್ಕ್ ಅವರು ತಮಗಿದ್ದ ಮಾನಸಿಕ ಖಾಯಿಲೆಯು ಗುಣಮುಖವಾಗದ ವಿಚಾರದಲ್ಲಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ಭಾವ ವಿಠಲ ನಾಯ್ಕ ಎಂಬವರು ನೀಡಿದ ಮಾಹಿತಿಯಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!