ತರಗತಿಯಲ್ಲಿ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದ ಪ್ರಾಧ್ಯಾಪಕ: ಘಟನೆ ಖಂಡಿಸಿದ ಅಮೃತ್ ಶೆಣೈ

ಉಡುಪಿ ನ.28 : ಮಣಿಪಾಲದ ಪ್ರತಿಷ್ಠಿತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೋರ್ವರು ತರಗತಿಯಲ್ಲಿ ವಿದ್ಯಾರ್ಥಿಗೆ “ಭಯೋತ್ಪಾದಕ” ಎಂದು ಉಲ್ಲೇಖಿಸಿರುವ ಘಟನೆಯನ್ನು ಕಾಂಗ್ರೆಸ್ ಪಕ್ಷದ ಮುಖಂಡರಾದ ಅಮೃತ್ ಶೆಣೈ ಅವರು ಖಂಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು,“ಟ್ವಿಟರ್ ನಲ್ಲಿ ಪ್ರಾಧ್ಯಾಪಕರು ಭಯೋತ್ಪಾದಕ ಎಂದು ಉಲ್ಲೇಖಿಸಿದಕ್ಕೆ ವಿದ್ಯಾರ್ಥಿಯು ಆಕ್ಷೇಪ ವ್ಯಕ್ತಪಡಿಸಿದ ವೀಡಿಯೋ ವೈರಲಾಗಿದ್ದು ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ದೇಶದ ಭವಿಷ್ಯವನ್ನು ರೂಪಿಸಬೇಕಾಗಿರುವ ಪ್ರಾಧ್ಯಾಪಕರ ವರ್ತನೆ ಇದಾಗಿರಬಾರದು. ಈ ದೇಶದಲ್ಲಿ ವ್ಯವಸ್ಥಿತವಾಗಿ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಲಾಗುತ್ತಿದೆ. ಮುಸಲ್ಮಾನರನ್ನು ಭಯೋತ್ಪಾದಕರಂತೆ ಬಿಂಬಿಸುವ ಅಭಿಯಾನ ನಡೆಸಲಾಗುತ್ತದೆ. ಬಿಜೆಪಿ ರಾಜಕೀಯ ಲಾಭಕ್ಕಾಗಿ ಈ ರೀತಿಯ ಮನಸ್ಥಿತಿಯನ್ನು ನಿರ್ಮಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವೆಲ್ಲರೂ ಜಾತಿ-ಮತ-ಧರ್ಮದ ಭೇದ ಮರೆತು ಒಂದಾಗಬೇಕು. ನಾವೆಲ್ಲರೂ ಒಂದು ಎಂಬ ಭಾವನೆಯನ್ನು ಸುಧೃಡಗೊಳಿಸಬೇಕಾಗಿದೆ. ಈ ರೀತಿಯ ವರ್ತನೆ ತೋರಿರುವ ಪ್ರಾಧ್ಯಾಪಕರ ವಿರುದ್ಧ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮತ್ತು ಸರಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!