ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷರಾಗಿ ರತ್ನಾಕರ್ ಇಂದ್ರಾಳಿ ಆಯ್ಕೆ
ಉಡುಪಿ ಡಿ.1 (ಉಡುಪಿ ಟೈಮ್ಸ್ ವರದಿ) : ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ, ಸಂಘದ ರಾಜ್ಯ ಸರ್ಕಾರದ ನಾಮ ನಿರ್ದೇಶಿತ ಸದಸ್ಯ ರತ್ನಾಕರ ಇಂದ್ರಾಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇವರು ಬಿಜೆಪಿ ನೇಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿದ್ದು, ರಾಜಕೀಯ, ಸಾಮಾಜಿಕ, ಧಾರ್ಮಿಕ, ಸಾಂಸ್ಕøತಿಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ. ಸಂಘದ ನೂತನ ಉಪಾಧ್ಯಕ್ಷೆಯಾಗಿ ಗೀತಾ ಕೇಶವ ಶೆಟ್ಟಿಗಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
1938 ರಲ್ಲಿ ಮಣಿಪಾಲದ ನಿರ್ಮಾತೃ ದಿ. ಡಾ| ಟಿ.ಎಂ.ಎ.ಪೈ ಯವರ ಹಿರಿಯ ಸಹೋದರರಾದ ದಿ. ತೋನ್ಸೆ ಪುರುಷೋತ್ತಮ ಅನಂತ ಪೈ ಯವರ ಸ್ಥಾಪಕ ಅಧ್ಯಕ್ಷತೆಯಲ್ಲಿ ಪ್ರಾರಂಭವಾದ ಸಂಘವು, 1993-94 ರಲ್ಲಿ ಭಾರತ ಸರಕಾರದ ವಸ್ತ್ರ ಮಂತ್ರಾಲಯದಿಂದ ಕರಕುಶಲ ಸಹಕಾರ ಕ್ಷೇತ್ರದ ರಾಷ್ಟ್ರೀಯ ಪ್ರಶಸ್ತಿ ಹಾಗೂ ಹಲವಾರು ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.