ಬ್ರಹ್ಮಾವರ: ಬಸ್ ಡಿಕ್ಕಿ-ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

ಬ್ರಹ್ಮಾವರ ಡಿ.1 (ಉಡುಪಿ ಟೈಮ್ಸ್ ವರದಿ) : ಬಸ್ ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತಪಟ್ಟ ಘಟನೆ ವಾರಂಬಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ವೊಂದರ ಎದುರು ನಡೆದಿದೆ.

ಇಂದುಶೇಖರ್ ಮೃತಪಟ್ಟವರು.

ಇವರು ನ.30 ರ ರಾತ್ರಿ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಬಸ್ ನ್ನು ಚಲಾಯಿಸಿಕೊಂಡು ಬಂದ ಚಾಲಕ ಮಹಮ್ಮದ್ ರಫೀಕ್ ಎಂಬಾತ ವಾರಂಬಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ಎದುರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ರಸ್ತೆ ದಾಟಲು ನಿಂತಿದ್ದ ಇಂದುಶೇಖರ್ ಅವರಿಗೆ ಡಿಕ್ಕಿ ಹೊಡೆದು, ರಸ್ತೆಗೆ ಬಿದ್ದು ಬಸ್ಸಿನ ಟಯರ್‍ಗೆ ಸಿಕ್ಕಿಕೊಂಡಿದ್ದ ಅವರನ್ನು ರಸ್ತೆಯಲ್ಲಿ ಸ್ವಲ್ಪದೂರ ಎಳೆದುಕೊಂಡು ಹೋಗಿದ್ದಾನೆ. ಪರಿಣಾಮ ಇಂದುಶೇಖರ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಹಂದಾಡಿ ಗ್ರಾಮದ ಬಾಬು ದೇವಾಸಾಯಂ ಎಂಬವರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!