ಬೈಕ್ ಹಿಂದಿಕ್ಕಿದ್ದಕ್ಕೆ ತಂಡದಿಂದ ಥಳಿತ: ಮನನೊಂದ ಯುವಕ ಆತ್ಮಹತ್ಯೆ

ಕೋಲಾರ ಜಿಲ್ಲೆ ಡಿ.2 : ಬೈಕ್ ಹಿಂದಿಕ್ಕಿದ ಎಂಬ ಕಾರಣಕ್ಕೆ ಯುಕನೋರ್ವನನ್ನು ನಾಲ್ವರು ಮರಕ್ಕೆ ಕಟ್ಟಿ ಥಳಿಸಿದ ಪರಿಣಾಮ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.30 ರಂದು ಪೆತ್ತಾಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಉದಯ್ ಕಿರಣ್ (25) ಥಳಿತಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕ.

ಘಟನೆಗೆ ಸಂಬಂಧಿಸಿ ಪೆತ್ತಾಂಡ್ಲಹಳ್ಳಿಯ ರಾಜು, ಶಿವರಾಜ್, ಗೋಪಾಲಕೃಷ್ಣಪ್ಪ ಹಾಗೂ ಮುನಿವೆಂಕಟಪ್ಪ ಎಂಬವರ ವಿರುದ್ಧ ನಂಗಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿಗಳೆಲ್ಲರೂ ಸಂಬಂಧಿಗಳಾಗಿದ್ದು, ತಲೆ ಮರೆಸಿಕೊಂಡಿದ್ದಾರೆ.
ಅವರ ವಿರುದ್ಧ ಮೃತನ ಮಾವ ಬಿ.ಎಚ್. ನಾಗರಾಜ್ ಎಂಬವರು ನೀಡಿದ ದೂರಿನಂತೆ ದೌರ್ಜನ್ಯ, ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ.

ಬೈಕ್ ಹಿಂದಿಕ್ಕಿದ ಕಾರಣ ಜಗಳ ತೆಗೆದ ಆರೋಪಿಗಳು ಹಲ್ಲೆ ನಡೆಸಿ ಉದಯ್‍ನ ಬೈಕ್ ಮತ್ತು ಮೊಬೈಲ್ ಕಿತ್ತುಕೊಂಡು ಹೋಗಿದ್ದರು. ಅವನ್ನು ವಾಪಸ್ ಕೇಳಲು ಆತ ಪೆತ್ತಾಂಡ್ಲಹಳ್ಳಿಗೆ ಹೋಗಿದ್ದ. ಈ ಸಂದರ್ಭದಲ್ಲಿ ಆರೋಪಿಗಳು ಆತನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ಜಾತಿ ನಿಂದನೆ ಮಾಡಿದ್ದರು’ ಎಂದು ಮೃತನ ಮಾವ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿ ಸಬ್ ಇನ್‍ಸ್ಪೆಕ್ಟರ್ ಪ್ರದೀಪ್ ಸಿಂಗ್ ಅವರು ಮಾಹಿತಿ ನೀಡಿದ್ದು, `ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!